Advertisement
ಇಲ್ಲಿನ ಕೃಷಿ ವಿವಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬೆಳಗಾವಿ ವಿಭಾಗದ ಏಳು ಜಿಲ್ಲೆಗಳ “ಭರವಸೆಗಳ ಸಾಕಾರದ ಸಂಭ್ರಮ’ ಕಾರ್ಯಕ್ರಮದಲ್ಲಿ ಏಳು ಜಿಲ್ಲೆಗಳ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿತರಿಸಿ ಅವರು ಮಾತನಾಡಿದರು.
Related Articles
Advertisement
ಅವರು ನೀರಾವರಿಗೆ 22 ಸಾವಿರ ಕೋಟಿ ಖರ್ಚು ಮಾಡಿದರೆ ನಾವು 60 ಸಾವಿರ ಕೋಟಿ ಅನುದಾನ ನೀಡಿದ್ದೇವೆ. ಎಸ್ಸಿ, ಎಸ್ಟಿ ಜನರಿಗೆ ಅವರು 21 ಸಾವಿರ ಕೋಟಿ ನೀಡಿದರೆ, ನಾವು ಕಾಂಗ್ರೆಸ್ 87 ಸಾವಿರ ಕೋಟಿ ಅನುದಾನ ಪೂರೈಸಿದ್ದೇವೆ. ಆದರೆ ಸರ್ಕಾರದ ವಿರುದ್ಧ ಸುಳ್ಳುಗಳನ್ನೇ ಮತ್ತೆ ಮತ್ತೆ ಹೇಳಿ ಅದನ್ನು ಜನರು ನಂಬುವಂತೆ ಮಾಡಲು ಬಿಜೆಪಿ ಪ್ರಯತ್ನ ಮಾಡುತ್ತಿದೆ ಎಂದರು.
300 ಇಂದಿರಾ ಕ್ಯಾಂಟೀನ್: ಬಡವರ ಪರವಾಗಿ ಕೆಲಸ ಮಾಡುವ ಕಾಂಗ್ರೆಸ್ ಸರ್ಕಾರ ಬಡವರಿಗೆ ಅನ್ನಭಾಗ್ಯ, ಕ್ಷೀರ ಭಾಗ್ಯ ಕೃಷಿ ಭಾಗ್ಯದಂತಹ ಸೌಲಭ್ಯಗಳನ್ನು ಕೊಟ್ಟಿದೆ. ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ಇದೀಗ ಇಂದಿರಾ ಕ್ಯಾಂಟೀನ್ ಆರಂಭಿಸಿದೆ. ಬೆಂಗಳೂರಿನಲ್ಲಿಯೇ 200 ಇಂದಿರಾ ಕ್ಯಾಂಟೀನ್ ಬರಲಿದ್ದು, ರಾಜ್ಯದ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ 300 ಇಂದಿರಾ ಕ್ಯಾಂಟೀನ್ ಆರಂಭಿಸುತ್ತೇವೆ ಎಂದರು.
ಏಳು ಜಿಲ್ಲೆಗಳಿಗೆ ಸೌಲಭ್ಯ: ಕಾರ್ಯಕ್ರಮದಲ್ಲಿ ಧಾರವಾಡ, ಹಾವೇರಿ, ಗದಗ, ಕಾರವಾರ, ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಸೌಲಭ್ಯಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿತರಿಸಿದರು. ವಾರ್ತಾ ಇಲಾಖೆ ನಿರ್ದೇಶಕ ಡಾ| ಹರ್ಷಾ ಪಿ.ಎಸ್. ಸ್ವಾಗತಿಸಿದರು. ಶಂಕರ ಪ್ರಕಾಶ ನಿರೂಪಿಸಿದರು. ಧಾರವಾಡ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ವಂದನಾರ್ಪಣೆ ಮಾಡಿದರು.