Advertisement

Skill Development Board scam: ನಾಯ್ಡು ಕೇಸು ವಿಚಾರಣೆಗೆ ಹೊಸ ಪೀಠ

09:09 PM Sep 27, 2023 | Team Udayavani |

ನವದೆಹಲಿ: ಕೌಶಲ್ಯಾಭಿವೃದ್ಧಿ ಮಂಡಳಿ ಹಗರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್‌ ವಜಾಗೊಳಿಸಲು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಅ.3ರಂದು ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದೆ. ಪ್ರಕರಣದ ವಿಚಾರಣೆ ನಡೆಸಬೇಕಾಗಿದ್ದ ನ್ಯಾ.ಸರಸ ವೆಂಕಟನಾರಾಯಣ ಭಟ್ಟಿ ಹಿಂದೆ ಸರಿದರು.

Advertisement

ಹೀಗಾಗಿ, ತುರ್ತು ವಿಚಾರಣೆಗಾಗಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠದ ಮುಂದೆ ವಿಚಾರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅ.3ರಂದು ಪ್ರಕರಣವನ್ನು ಹೊಸ ನ್ಯಾಯಪೀಠ ರಚನೆ ಮಾಡಿ ಅದರ ಮೂಲಕ ವಿಚಾರಣೆ ನಡೆಸಲಾಗುತ್ತದೆ ಎಂದರು. ಸೆ.9ರಂದು ನಾಯ್ಡು ಅವರನ್ನು ಬಂಧಿಸಲಾಗಿತ್ತು.

 

Advertisement

Udayavani is now on Telegram. Click here to join our channel and stay updated with the latest news.

Next