Advertisement

ಕೋವಿಡ್‌ ಭೀತಿ ಹಿನ್ನೆಲೆ: ಮೌಲ್ಯಮಾಪನಕ್ಕೆ ಹೊಸ ಕೇಂದ್ರ

02:29 AM Jul 06, 2020 | Sriram |

ಬೆಂಗಳೂರು: ಕೋವಿಡ್‌ ಭೀತಿ ಹಿನ್ನೆಲೆಯಲ್ಲಿ ಎಸೆಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಸಂದರ್ಭದಲ್ಲಿ ಮೌಲ್ಯಮಾಪಕರ ಅಂತರ್‌ ಜಿಲ್ಲಾ ಪ್ರಯಾಣ ಕಡಿಮೆಗೊಳಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಕೆಲವು ಜಿಲ್ಲೆಗಳಲ್ಲಿ ಹೊಸ ಮೌಲ್ಯಮಾಪನ ಕೇಂದ್ರ ತೆರೆಯಲು ನಿರ್ಧರಿಸಿದೆ.

Advertisement

ಮೌಲ್ಯಮಾಪನವು ಜು. 13ರಿಂದ ಆರಂಭ ವಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಹೊಸ ಕೇಂದ್ರಗಳನ್ನು ತೆರೆಯುವುದರಿಂದ ಮೌಲ್ಯ ಮಾಪಕರಿಗೆ ಪರಿಷ್ಕೃತ ನೇಮಕಾತಿ ಆದೇಶ ಜು.6ರಿಂದ ಆನ್‌ಲೈನ್‌ನಲ್ಲಿ ಲಭ್ಯ ವಾಗಲಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.

ಎಸೆಸೆಲ್ಸಿ ಪರೀಕ್ಷೆ ಸಂದರ್ಭ ಅಕ್ರಮ ನಡೆದಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆಗೆ ಸಮಿತಿ ರಚನೆ ಮಾಡಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next