Advertisement

ಸುಪ್ರೀಂ ‘ಎದೆಗಾರಿಕೆ’ತೋರಲಿ: ನಿವೃತ್ತ ನ್ಯಾಯಮೂರ್ತಿ ಮದನ್‌ ಬಿ. ಲೋಕೂರ್‌

10:11 AM Nov 21, 2019 | Hari Prasad |

ನವದೆಹಲಿ: ದೇಶದ ಸರ್ವೋಚ್ಚ ನ್ಯಾಯಾಲಯವು ತ್ವರಿತವಾಗಿ ತನ್ನ ಘನತೆ, ಶ್ರೇಷ್ಠತೆ, ವಿಶ್ವಾಸಾರ್ಹತೆಯನ್ನು ಪುನಃಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸದಿದ್ದರೆ ನ್ಯಾಯಾಂಗ ಸ್ವಾತಂತ್ರ್ಯವು ಅಪಾಯಕ್ಕೆ ಸಿಲುಕಲಿದೆ ಎಂದು ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಮದನ್‌ ಬಿ. ಲೋಕೂರ್‌ ಎಚ್ಚರಿಕೆ ನೀಡಿದ್ದಾರೆ.

Advertisement

ಸುಪ್ರೀಂ ಕೋರ್ಟ್‌ನ ಇತ್ತೀಚಿನ ಮಹತ್ವದ ತೀರ್ಪುಗಳು ಹಾಗೂ ಆಡಳಿತ ನಿರ್ವಹಣೆ ನಿರ್ಧಾರಗಳ ಕುರಿತು ಹಿಂದೂಸ್ತಾನ್‌ ಟೈಮ್ಸ್‌ನಲ್ಲಿ ಲೇಖನ ಬರೆದಿರುವ ಅವರು, ನಮ್ಮ ನ್ಯಾಯಮೂರ್ತಿಗಳು ಕೆಲ ವೇಳೆ ಎದೆಗಾರಿಕೆಯನ್ನು ತೋರಿಸಬೇಕಿದೆ. ವ್ಯಕ್ತಿ ಸ್ವಾತಂತ್ರ್ಯದ ಮಹತ್ವದ ವಿಷಯಗಳ‌ಲ್ಲಿ ವಿಶೇಷ ಧೈರ್ಯ ಪ್ರದರ್ಶಿಸಬೇಕಿದೆ ಎಂದು ತಿಳಿಸಿದ್ದಾರೆ.

ಭಾರತೀಯ ನಾಗರಿಕರು ನ್ಯಾಯಾಂಗ ವ್ಯವಸ್ಥೆಯಲ್ಲಿ ವಿಶ್ವಾಸ ಹಾಗೂ ನಂಬಿಕೆಯನ್ನು ಮುಂದುವರಿಸಿಕೊಂಡು ಹೋಗ ಬೇಕಾದರೆ ಸುಪ್ರೀಂ ಕೋರ್ಟ್‌ ಲೋಪಗಳನ್ನು ತಿದ್ದುವತ್ತ ಕಾರ್ಯ ಪ್ರವೃತ್ತರಾಗಬೇಕೇ ಹೊರತು ತೆವಳುತ್ತಾ ಸಾಗಬಾರದು ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬೋಬ್ಡೆ ಅವರು ನ್ಯಾಯಾಂಗದಲ್ಲಿ ಪಾರದರ್ಶಕತೆ ಕಾಪಾಡಬೇಕಿದೆ ಎಂದು ಸಲಹೆ ನೀಡಿದ್ದಾರೆ. ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿದ್ದ ಮದನ್‌ ಬಿ. ಲೋಕೂರ್‌ 2018ರ ಡಿಸೆಂಬರ್‌ನಲ್ಲಿ ನಿವೃತ್ತರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next