Advertisement

‘ಬಡವರ ಏಳಿಗೆ ನನ್ನ ಮೊದಲ ಪ್ರಾಶಸ್ತ್ಯ’ : ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಮೊದಲ ಮಾತು

08:28 PM Jul 27, 2021 | Team Udayavani |

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನೇಮಕಗೊಂಡ ಬಸವರಾಜ್ ಬೊಮ್ಮಾಯಿಯವರು ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದರು.

Advertisement

ರಾಜಭವನಕ್ಕೆ ತೆರಳುವ ಮುನ್ನ ಮಾಧ್ಯಮಗಳಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಯಡಿಯೂರಪ್ಪನವರ ನಿರೀಕ್ಷೆಯಂತೆ ನಾನು ಕಾರ್ಯ ನಿರ್ವಹಿಸುತ್ತೇನೆ. ಜನರಪರ ಆಡಳಿತ ನೀಡುತ್ತೇನೆ. ಕೋವಿಡ್ ಹಾಗೂ ನೆರೆಯಿಂದ ಸಂಕಷ್ಟದಲ್ಲಿರುವ ಜನರ ಸಮಸ್ಯೆ ನಿವಾರಿಸುತ್ತೇನೆ. ಬಡವರ ಏಳಿಗೆ ನನ್ನ ಮೊದಲ ಪ್ರಾಶಸ್ತ್ಯ ಎಂದರು.

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜನಪರ ಆಡಳಿತ ನೀಡುವ ಮೂಲಕ ಕರ್ನಾಟಕ ರಾಜ್ಯವನ್ನು ಮುನ್ನಡೆಸಲು ಹಗಲಿರುಳು ಶ್ರಮಿಸುತ್ತೇನೆ ಎಂದರು. ರಾಜ್ಯದ ಆರ್ಥಿಕ ಸ್ಥಿತಿಗತಿಗಳನ್ನು ಸುಧಾರಿಸಲು ಶ್ರಮ ವಹಿಸುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next