Advertisement

Sri Lanka ಪ್ರವಾಸದಿಂದ ಭಾರತ ತಂಡಕ್ಕೆ ಹೊಸ ಕೋಚ್‌: ಶಾ

11:19 PM Jul 01, 2024 | Team Udayavani |

ಹೊಸದಿಲ್ಲಿ: ಭಾರತ ಕ್ರಿಕೆಟ್‌ ತಂಡದ ನೂತನ ಕೋಚ್‌ ಆಯ್ಕೆ ಕುರಿತು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಕೆಲವು ಮಾಹಿತಿ ನೀಡಿದ್ದಾರೆ. ಜು. 27ರಂದು ಆರಂಭಗೊಳ್ಳಲಿರುವ ಶ್ರೀಲಂಕಾ ಸರಣಿಯಿಂದ ಭಾರತ ಕ್ರಿಕೆಟ್‌ ತಂಡದ ಜವಾಬ್ದಾರಿ, ನೂತನ ತರಬೇತುದಾರನ ಹೆಗಲೇರಲಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಮಾಜಿ ಕ್ರಿಕೆಟಿಗರಾದ ಗೌತಮ್‌ ಗಂಭೀರ್‌ ಮತ್ತು ಡಬ್ಲ್ಯು.ವಿ. ರಾಮನ್‌ ಅವರ ಹೆಸರು ಅಂತಿಮ ಪಟ್ಟಿಯಲ್ಲಿದೆ ಎಂದು ಹೇಳಿದ್ದಾರೆ.

Advertisement

ಸಂದರ್ಶನದಲ್ಲಿ ಮಾತನಾಡಿರುವ ಜಯ್‌ ಶಾ, “ಕೋಚ್‌ ಜತೆಗೆ ಬಿಸಿಸಿಐ ಆಯ್ಕೆಗಾರರ ನೇಮಕವೂ ಶೀಘ್ರದಲ್ಲೇ ನಡೆಯಲಿದೆ. ಕ್ರಿಕೆಟ್‌ ಸಲಹಾ ಸಮಿತಿ (ಸಿಎಸಿ) ಈಗಾಗಲೇ ಸಂದರ್ಶನ ನಡೆಸಿ ಇಬ್ಬರ ಹೆಸರನ್ನು ಅಂತಿಮಗೊಳಿಸಿದೆ. ಶೀಘ್ರದಲ್ಲೇ ಈ ಬಗ್ಗೆ ಘೋಷಣೆಯಾಗಲಿದೆ. ಜು. 6ರಂದು ಆರಂಭಗೊಳ್ಳಲಿರುವ ಜಿಂಬಾಬ್ವೆ ಪ್ರವಾಸಕ್ಕೆ ವಿ.ವಿ.ಎಸ್‌.ಲಕ್ಷ್ಮಣ್‌ ತಂಡದ ಜತೆಗೆ ತೆರಳಲಿದ್ದಾರೆ.

ಶ್ರೀಲಂಕಾ ಪ್ರವಾಸದ ವೇಳೆ ನೂತನ ಕೋಚ್‌ ಜತೆಯಾಗಲಿದ್ದಾರೆ. ಚಾಂಪಿಯನ್ಸ್‌ ಟ್ರೋಫಿ, ವಿಶ್ವ ಕ್ರಿಕೆಟ್‌ ಚಾಂಪಿಯನ್‌ಶಿಪ್‌ನಲ್ಲಿ ಹಿರಿಯ ಆಟಗಾರರಿರುತ್ತಾರೆ. ಟಿ20 ಕ್ರಿಕೆಟ್‌ ತಂಡದ ಮುಂದಿನ ನಾಯಕನ ಬಗ್ಗೆ ಆಯ್ಕೆಗಾರರು ನಿರ್ಧರಿಸಲಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next