Advertisement

ಬಾಲಸೋರ್‌: ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಅಗ್ನಿ ಅವಘಡ

09:15 AM May 12, 2019 | Vishnu Das |

ಭುವನೇಶ್ವರ್‌: ದೆಹಲಿ-ಭುವನೇಶ್ವರ್‌ ನಡುವೆ ಸಂಚರಿಸುವ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಷಾತ್‌ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

Advertisement

ವರದಿಯಾದಂತೆ ರೈಲಿನ ಕೊನೆಯಲ್ಲಿರುವ ಜನರೇರ್ಟ್‌ ಕೋಚ್‌ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ರೈಲನ್ನು ನಿಲ್ಲಿಸಿ ಬೇರೆ ಬೋಗಿಗಳನ್ನು ಬೇರ್ಪಡಿಸಿ ಬೆಂಕಿ ವ್ಯಾಪಿಸುವುದನ್ನು ತಡೆಯಲಾಗಿದೆ.

ಅಗ್ನಿ ಶಾಮಕ ದಳದ ಸಿಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.

ಅವಘಡದಲ್ಲಿ ಯಾರೊಬ್ಬರಿಗೂ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.

ಕಳೆದ ತಿಂಗಳಿನಲ್ಲಿ ಇದೇ ರೈಲಿನಲ್ಲಿ ವಿಷಾಹಾರ ಸೇವಿಸಿ 20 ಕ್ಕೂ ಹೆಚ್ಚ ಪ್ರಯಾಣಿಕರು ಅಸ್ವಸ್ಥಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next