Advertisement

Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ

11:14 PM Oct 09, 2024 | Team Udayavani |

ನವದೆಹಲಿ: ದೇಶದ ಬಡವರಿಗೆ ತಿಂಗಳಿಗೆ 5 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡುವ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ್‌ ಅನ್ನ ಯೋಜನೆಯನ್ನು 2028ರ ಅಂತ್ಯದವರೆಗೂ ಮುಂದುವರಿಸಲು ಕೇಂದ್ರ ಸಂಪುಟ ನಿರ್ಧರಿಸಿದೆ.

Advertisement

ಬುಧವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಕ್ತ ಹೀನತೆ ಮತ್ತು ಪೌಷ್ಟಿಕಾಂಶ ಕೊರತೆಯನ್ನು ತಗ್ಗಿಸುವ ಗುರಿಯೊಂದಿಗೆ ಕೇಂದ್ರ ಸರ್ಕಾರ 2020ರ ಏಪ್ರಿಲ್‌ನಲ್ಲಿ ಈ ಯೋಜನೆಯನ್ನು ಆರಂಭಿಸಿತ್ತು. ಈಗ ಇದನ್ನು 17,082 ಕೋಟಿ ರೂ. ವೆಚ್ಚದಲ್ಲಿ 2028ರ ಡಿಸೆಂಬರ್‌ವರೆಗೂ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅಶ್ವಿ‌ನಿ ವೈಷ್ಣವ್‌ ಮಾಹಿತಿ ನೀಡಿದ್ದಾರೆ.

ಎನ್‌ಎಚ್‌ಎಂಸಿಗೆ ಒಪ್ಪಿಗೆ: ರಾಷ್ಟ್ರೀಯ ನೌಕಾ ಪಾರಂಪರಿಕ ಸಂಕೀರ್ಣ(ಎನ್‌ಎಚ್‌ಎಂಸಿ)ವನ್ನು ಗುಜರಾತ್‌ನ ಲೋಥಾಲ್‌ನಲ್ಲಿ 2 ಹಂತದಲ್ಲಿ ನಿರ್ಮಾಣಕ್ಕೆ  ಒಪ್ಪಿಗೆ ನೀಡಲಾಗಿದೆ.

ಗಡಿ ಮೂಲಸೌಕರ್ಯ ಅಭಿವೃದ್ಧಿ:  ಗಡಿ ಮೂಲಸೌಕರ್ಯ ಅಭಿವೃದ್ಧಿಯ ಭಾಗವಾಗಿ ರಾಜಸ್ಥಾನ, ಪಂಜಾಬ್‌ನಲ್ಲಿ 2,280 ಕಿ.ಮೀ. ರಸ್ತೆ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next