Advertisement

ನೂತನ ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್‌ ಇಂದು ಅಧಿಕಾರ ಸ್ವೀಕಾರ

12:30 AM Feb 22, 2019 | |

ಮಂಗಳೂರು: ಮಂಗಳೂರು ನಗರ ಪೊಲೀಸ್‌ ನೂತನ ಆಯುಕ್ತರಾಗಿ ಸಂದೀಪ್‌ ಪಾಟೀಲ್‌ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ಪ್ರಸ್ತುತ ನಗರ ಪೊಲೀಸ್‌ ಆಯುಕ್ತರಾಗಿರುವ ಟಿ.ಆರ್‌. ಸುರೇಶ್‌ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ನೂತನ ಆಯುಕ್ತರು ಶುಕ್ರವಾರ ಅಧಿಕಾರ ಸ್ವೀಕರಿಸಲಿದ್ದಾರೆ. 

Advertisement

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವರ್ಗಾವಣೆ ಮಾಡಲಾಗಿದೆ. ಮೂಲತಃ ಬೆಂಗಳೂರಿನ ನಿವಾಸಿಯಾಗಿರುವ ಸಂದೀಪ್‌ ಪಾಟೀಲ್‌ 2004ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿ. ದಾವಣಗೆರೆ, ಬೆಳಗಾವಿ, ಮಂಡ್ಯ ಮೊದಲಾದ ಕಡೆ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿ ಡಿಐಜಿ ಹುದ್ದೆಗೆ ಭಡ್ತಿ ಹೊಂದಿದ್ದರು. ಪ್ರಸ್ತುತ ಬೆಂಗಳೂರು ಸಿಎಆರ್‌ ಘಟಕದಲ್ಲಿ ಡಿಐಜಿ ಹಾಗೂ ಜಂಟಿ ಆಯುಕ್ತರಾಗಿದ್ದಾರೆ.  

Advertisement

Udayavani is now on Telegram. Click here to join our channel and stay updated with the latest news.

Next