Advertisement

‘ಸಾರ್ವಜನಿಕರಲ್ಲಿ ವಿನಂತಿ’ ; ಈ ಚಿತ್ರವನ್ನು ನೋಡಲು ಮರೆಯದಿರಿ!

12:28 PM May 26, 2019 | Hari Prasad |

ಕನ್ನಡದಲ್ಲಿ ಇನ್ನೊಂದು ಪ್ರಯೋಗಾತ್ಮಕ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಕೃಪಾ ಸಾಗರ್ ಅವರ ಚೊಚ್ಚಲ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ‘ಸಾರ್ವಜನಿಕರಲ್ಲಿ ವಿನಂತಿ’ ಎಂಬ ಶೀರ್ಷಿಕೆ ಇಡಲಾಗಿದೆ.

Advertisement

ನಮ್ಮ ಸಮಾಜದಲ್ಲಿ ದಿನನಿತ್ಯವೆಂಬಂತೆ ನಡೆಯುವ ಅಪರಾಧ ಘಟನೆಗಳ ಸುತ್ತ ಈ ಚಿತ್ರದ ಕಥೆ ಸುತ್ತುತ್ತದೆ ಎಂಬ ಮಾಹಿತಿಯನ್ನು ಈ ಚಿತ್ರದ ನಿರ್ದೇಶಕರು ನೀಡುತ್ತಾರೆ. ಈ ಪ್ರಯೋಗಾತ್ಮಕ ಚಿತ್ರದಲ್ಲಿ ಹೊಸಬರ ತಂಡವೇ ಕೆಲಸ ಮಾಡಿರುವುದು ಇನ್ನೊಂದು ವಿಶೇಷ. ಮದನ್ ರಾಜಾ ಮತ್ತು ಅಮೃತಾ ಎಂಬ ಹೊಸ ಪ್ರತಿಭೆಗಳು ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪರಿಚಯಗೊಳ್ಳುತ್ತಿದ್ದಾರೆ.

ಈ ಚಿತ್ರದಲ್ಲಿ ಪೊಲೀಸ್ ಪಾತ್ರವೇ ಹೈಲೈಟ್ ಆಗಿರುವುದರಿಂದ ಈ ಚಿತ್ರವನ್ನು ಕರುನಾಡಿನ ಸಮಸ್ತ ಪೊಲೀಸ್ ಬಳಗಕ್ಕೆ ಅರ್ಪಿಸುವುದಾಗಿ ನಿರ್ದೇಶಕರು ಹೆಮ್ಮೆಯಿಂದ ಹೇಳುತ್ತಾರೆ.


ಇಷ್ಟು ಮಾತ್ರವಲ್ಲದೇ ಪೊಲೀಸರಿಗಾಗಿಯೇ ಒಂದು ಹಾಡನ್ನು ಕಂಪೋಸ್ ಮಾಡಲಾಗಿದ್ದು ಖ್ಯಾತ ಗಾಯಕ ವಿಜಯ ಪ್ರಕಾಶ್ ಅವರಿಂದ ಹಾಡಿಸಲಾಗಿದೆ. ಈ ಚಿತ್ರದಲ್ಲಿ ಮಂಡ್ಯ ರಮೇಶ್, ರಮೇಶ್ ಪಂಡಿತ್ ಸೇರಿದಂತೆ ಹಲವರು ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

‘ಸಾರ್ವಜನಿಕರಲ್ಲಿ ವಿನಂತಿ’ ಚಿತ್ರದ ಟ್ರೈಲರ್ ಈಗಾಗಲೇ ಬಿಡುಗಡೆಗೊಂಡಿದೆ, ಮತ್ತು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.


Advertisement

Udayavani is now on Telegram. Click here to join our channel and stay updated with the latest news.

Next