Advertisement

ಸಿಎಂ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ನೂತನ ಶಾಸಕ ಸಲಗರ್

10:17 AM May 11, 2021 | Team Udayavani |

ಬಸವಕಲ್ಯಾಣ: ಶಾಸಕರಾಗಿ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿಗೆ ತೆರಳಿದ್ದ ಶಾಸಕ ಶರಣು ಸಲಗರ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

Advertisement

ಬಸವಕಲ್ಯಾಣ ವಿಧಾನಸಭಾ ಉಪ ಚುನಾವಣೆಯಲ್ಲಿ ತಮ್ಮ ಗೆಲುವಿಗೆ ಶ್ರಮಿಸಿದ ಸಿಎಂಗೆ ಶಾಸಕ ಶರಣು ಸಲಗರ ಸಿಎಂ ಕಾಲಿಗೆ ನಮಸ್ಕರಿಸುವ ಮೂಲಕ ಕೃತಜ್ಞತೆ ಸಲ್ಲಿಸಿದರು. ಕ್ಷೇತ್ರದಲ್ಲಿ ಕೊರೊನಾ ನಿಯಂತ್ರಣಕ್ಕೆ ಪ್ರಥಮಾದ್ಯತೆ ನೀಡಲಾಗಿದ್ದು, ಸೋಂಕು ಹರಡುವಿಕೆ ತಡೆಗೆ ವೈದ್ಯರ ತಂಡ, ತಾಲೂಕು ಮಟ್ಟದ ಅಧಿ ಕಾರಿಗಳ ಜತೆ ಸರಣಿ ಸಭೆ ನಡೆಸಲಾಗಿದೆ.

ಸೋಂಕಿತರನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದ್ದು, ಆಮ್ಲಜನಕದ ಕೊರತೆ ನೀಗಿಸಲು ಆಕ್ಸಿಜನ್‌ ಸಿಲಿಂಡರ್‌ ಪೂರೈಕೆ ವ್ಯವಸ್ಥೆ ಮಾಡಲಾಗಿದೆ ಎಂದು ಸಿಎಂಗೆ ಮಾಹಿತಿ ನೀಡಿದರು. ನಂತರ ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ ವಿ. ಸೋಮಣ್ಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಕ್ಷದ ಮುಖಂಡರನ್ನೂ ಭೇಟಿ ಮಾಡಿದ ಸಲಗರ ಸನ್ಮಾನಿಸುವ ಮೂಲಕ ಧನ್ಯವಾದ ತಿಳಿಸಿದರು. ಸಚಿವ ಪ್ರಭು ಚವ್ಹಾಣ, ಸಂಸದ ಭಗವಂತ ಖೂಬಾ, ಎನ್‌ಎಸ್‌ಎಸ್‌ಕೆ ಅಧ್ಯಕ್ಷ ಡಿ.ಕೆ. ಸಿದ್ರಾಮ ಇದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next