Advertisement

ಬಿಜೆಪಿ ಜಿಲ್ಲಾ ಘಟಕದಿಂದ ನೂತನ ಪದಾಧಿಕಾರಿಗಳಿಗೆ ಸನ್ಮಾನ

09:01 PM Jan 21, 2022 | Team Udayavani |

ಬಳ್ಳಾರಿ: ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ನೂತನ ಪದಾ ಧಿಕಾರಿಗಳ ಸಭೆ ಗುರುವಾರ ನಡೆಯಿತು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್‌ ನಾರಾಯಣ, ನೂತನ ಜಿಲ್ಲಾಧ್ಯಕ್ಷ ಗೋನಾಳ್‌ ಮುರಹರಗೌಡ, ನಗರ ಶಾಸಕ ಜಿ.ಸೋಮಶೇಖರರೆಡ್ಡಿ, ಸಿರುಗುಪ್ಪ ಶಾಸಕ ಎಂ.ಎಸ್‌. ಸೋಮಲಿಂಗಪ್ಪ, ಎಂಎಲ್‌ಸಿ ವೈ. ಎಂ. ಸತೀಶ್‌ ಅವರು ಸಭೆಯನ್ನು ಉದ್ಘಾಟಿಸಿದರು.

Advertisement

ಬಳಿಕ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಗಣ್ಯರು ಮಾತನಾಡಿದರು. ಬಳಿಕ ಸಭೆಯಲ್ಲಿ ವಿಧಾನ ಪರಿಷತ್‌ ನೂತನ ಸದಸ್ಯ ವೈ.ಎಂ.ಸತೀಶ್‌ ಮತ್ತು ಬಳ್ಳಾರಿ, ವಿಜಯನಗರ ಜಿಲ್ಲೆಗಳ ನೂತನ ಜಿಲ್ಲಾಧ್ಯಕ್ಷರಾದ ಗೋನಾಳ್‌ ಮುರಹರಗೌಡ, ಚನ್ನಬಸವನಗೌಡ ಪಾಟೀಲ್‌ ಅವರನ್ನು ಸನ್ಮಾನಿಸಲಾಯಿತು.

ಸಭೆಯಲ್ಲಿ ಬಳ್ಳಾರಿ ವಿಭಾಗ ಪ್ರಭಾರಿ ಸಿದ್ದೇಶ್‌ ಯಾದವ್‌, ಬಳ್ಳಾರಿ ಜಿಲ್ಲಾ ಪ್ರಭಾರಿ ಸಚ್ಚಿದಾನಂದ ಮೂರ್ತಿ, ವಿಭಾಗೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಪೂಜಪ್ಪ, ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಗುರುಲಿಂಗನಗೌಡ, ಜಿಪಂ ಮಾಜಿ ಉಪಾಧ್ಯಕ್ಷ ಕೆ.ಎ.ರಾಮಲಿಂಗಪ್ಪ, ಮಾಜಿ ಜಿಲ್ಲಾಧ್ಯಕ್ಷ ಜಿ.ವಿರೂಪಾಕ್ಷಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್‌ ಕುಮಾರ್‌ ಮೋಕಾ, ಕೆ.ಎಸ್‌.ಅಶೋಕ್‌ಕುಮಾರ್‌, ಶಿವಶಂಕರರೆಡ್ಡಿ, ಬುಡಾ ಅಧ್ಯಕ್ಷ ಪಿ.ಪಾಲಣ್ಣ, ಜಿಲ್ಲಾ ಮಾಧ್ಯಮ ಪ್ರಮುಖ ಕೃಷ್ಣಾರೆಡ್ಡಿ, ಜಿಲ್ಲಾ ಮಾಧ್ಯಮ ಸಹ ಪ್ರಮುಖ ರಾಜೀವ್‌ ತೊಗರಿ, ಜಿಲ್ಲಾ ಪದಾಧಿ ಕಾರಿಗಳು, ಜಿಲ್ಲಾ ಮೋರ್ಚಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ವಕ್ತಾರರು ಇದ್ದರು

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next