Advertisement

ಶಿಕ್ಷಕರಿಗೆ ಹೊಸ ಜವಾಬ್ದಾರಿ

12:45 PM Apr 30, 2020 | mahesh |

ಬೆಂಗಳೂರು: ಆರೋಗ್ಯ ಇಲಾಖೆಯು ಕೈಗೊಂಡಿರುವ ರಾಜ್ಯದ ಎಲ್ಲ ಕುಟುಂಬಗಳ ಸಾರ್ವತ್ರಿಕ ಸಮೀಕ್ಷಾ ಕಾರ್ಯಕ್ಕೆ ಅಗತ್ಯ ಸಹಕಾರ ನೀಡುವಂತೆ ಜಿಲ್ಲಾ ಉಪನಿರ್ದೇಶಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಿಸಿದೆ. ಈಗಾಗಲೆ ಮತಗಟ್ಟೆ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಶಿಕ್ಷಕರು ಕಡ್ಡಾಯವಾಗಿ ಸಮೀಕ್ಷೆಯಲ್ಲಿ ಭಾಗವಹಿಸಬೇಕು. ಸರಕಾರಿ ಮತ್ತು ಅನುದಾನಿತ ಶಿಕ್ಷಕರ ಲಭ್ಯತೆಯ ಆಧಾರದ ಮೇಲೆ ಪ್ರತಿ ಮತಗಟ್ಟೆ ಅಧಿಕಾರಿಯೊಂದಿಗೆ ಮತ್ತೂಬ್ಬ ಶಿಕ್ಷಕರನ್ನು ಹೆಚ್ಚುವರಿಯಾಗಿ ಸಮೀಕ್ಷೆಗೆ ನೇಮಿಸಬೇಕು ಎಂದು ಸೂಚಿಸಿದೆ.

Advertisement

ಮತಗಟ್ಟೆ ಅಧಿಕಾರಿ ಮತ್ತು ಪ್ರತಿಯೊಂದು ಮತಗಟ್ಟೆಗೆ ಹೆಚ್ಚುವರಿ ಸಮೀಕ್ಷಾ ಅಧಿಕಾರಿಯಾಗಿ ನೇಮಿಸಿರುವ ಶಿಕ್ಷಕರ ಮಾಹಿತಿಯನ್ನು ನೀಡಬೇಕು. ನಿರ್ದಿಷ್ಟ ಸಮಯದೊಳಗೆ ಸಮೀಕ್ಷೆ ಮುಗಿಸಬೇಕು. ಶಿಕ್ಷಕರು ತಮ್ಮ ಸ್ಮಾರ್ಟ್‌ ಫೋನ್‌ ಮೂಲಕ ಆರೋಗ್ಯ ಇಲಾಖೆ ಆ್ಯಪ್‌ ಬಳಸಿ ಸಮೀಕ್ಷೆ ನಡೆಸಬೇಕು. ಈ ಸಂಬಂಧ ಜಿಲ್ಲಾ ಉಪನಿರ್ದೇಶಕರು ಆಯಾ ಜಿಲ್ಲಾಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯಪ್ರವೃತ್ತರಾಗಬೇಕು ಎಂದು ಇಲಾಖೆ ಸೂಚನೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next