Advertisement

ನೂತನ ಸಕಾಲ ವೆಬ್ ಸೈಟ್ ಬಿಡುಗಡೆ

12:28 PM Apr 04, 2022 | Team Udayavani |

ಬೆಂಗಳೂರು: ಕಾಲಮಿತಿಯಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಭರವಸೆ ನೀಡುವ ಸಕಾಲ ಯೋಜನೆ ಜಾರಿಗೊಳಿಸಿ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಸಕಾಲ ದಶಮಾನೋತ್ಸವ’ ಕಾರ್ಯಕ್ರಮದಲ್ಲಿ ಸಕಾಲ ಇಲಾಖೆಯ ನೂತನ ವೆಬ್‌ಸೈಟ್‌ನ್ನು ಸಕಾಲ ಸಚಿವರಾದ ಬಿ.ಸಿ. ನಾಗೇಶ್ ಅವರು ಲೋಕಾರ್ಪಣೆ ಮಾಡಿ, ಸಕಾಲ ಪೋಸ್ಟರ್ ಬಿಡುಗಡೆ ಮಾಡಿದರು.

Advertisement

ಸಕಾಲ ಜಾರಿಯಲ್ಲಿ ಉತ್ತಮ ಸಾಧನೆ ಮಾಡಿ ಮೊದಲ ಮೂರು ಸ್ಥಾನದಲ್ಲಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪ್ರಶಂಸನಾ ಪತ್ರ ವಿತರಿಸಿದರು.

ಇದನ್ನೂ ಓದಿ:ನಾಳೆ ಸಿಎಂ ದೆಹಲಿ ಪ್ರವಾಸ: ಸಚಿವ ಸ್ಥಾನಾಕಾಂಕ್ಷಿಗಳಲ್ಲಿ ಹೆಚ್ಚಿದ ಕುತೂಹಲ

ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಸುರೇಶ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಕಾಲ ಮಿಷನ್‌ನ ನಿರ್ದೇಶಕರಾದ ಪೊನ್ನುರಾಜ್, ಹೆಚ್ಚುವರಿ ನಿರ್ದೇಶಕರಾದ ಡಾ. ಬಿ.ಆರ್. ಮಮತಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next