Advertisement

‘ಅಭ್ಯರ್ಥಿಗಳೂ ಕಾವಲು ಕಾಯಬಹುದು..’: ಈ ಬಾರಿ ಮತಯಂತ್ರ ಸುರಕ್ಷತೆಗೆ ಹೊಸ ವ್ಯವಸ್ಥೆ

06:58 PM May 09, 2023 | Team Udayavani |

ಮಂಗಳೂರು: ಮತದಾನ ನಡೆದ ಬಳಿಕ ಮತ ಯಂತ್ರಗಳನ್ನು ಹಿಂದಕ್ಕೆ ತಂದು ಭದ್ರತಾ ಕೊಠಡಿಗಳಲ್ಲಿ ಇರಿಸಲಾಗುತ್ತದೆ, ಆ ಬಳಿಕ ಮತ ಎಣಿಕೆಯಂದು ಅವುಗಳನ್ನು ಹೊರತೆಗೆದು ಎಣಿಕೆ ಮಾಡಲಾಗುತ್ತದೆ.

Advertisement

ಡಿಮಸ್ಟರಿಂಗ್‌ ಕೇಂದ್ರಗಳಿಂದ ಭದ್ರತಾ ಕೊಠಡಿಗೆ ಮತಯಂತ್ರ ತರುವಾಗ ಹಾಗೂ ಭದ್ರತಾ ಕೊಠಡಿಗಳಲ್ಲಿ ಇರಿಸಿರುವಾಗ ಕೇವಲ ಕೇಂದ್ರೀಯ ಅರೆ ಮಿಲಿಟರಿ ಪೊಲೀಸ್‌ ಪಡೆ (ಸಿಪಿಎಂಎಫ್)‌ ಭದ್ರತೆ ಕೊಡುವುದು ಸಹಜ. ಈ ಬಾರಿ ಚುನಾವಣಾ ಆಯೋಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಭದ್ರತೆ ನೀಡುವುದು ಹಾಗೂ ವೀಕ್ಷಣೆಗೆ ಮತ್ತೊಂದು ವರ್ಗಕ್ಕೆ ಅವಕಾಶ ಮಾಡಿಕೊಟ್ಟಿದೆ.

ಇದನ್ನೂ ಓದಿ:ಕಾಂಗ್ರೆಸ್ ತುಷ್ಟೀಕರಣದ ಪಕ್ಷ ಬಿಜೆಪಿ ವಿಕಾಸದ ಪಕ್ಷ : ಅಸ್ಸಾಂ ಸಿಎಂ ಹಿಮಂತ್ ಶರ್ಮ

ಹೌದು. ಈ ಬಾರಿ ಪಕ್ಷಗಳ ಅಭ್ಯರ್ಥಿ ಅಥವಾ ಅವರ ಪ್ರತಿನಿಧಿ ಮತಯಂತ್ರಗಳನ್ನು ಭದ್ರತಾ ಕೊಠಡಿಗೆ ತರುವ ವೇಳೆ ಕೇಂದ್ರೀಯ ಪೊಲೀಸ್‌ ಬಲದ ವಾಹನದ ಹಿಂದೆ ಪ್ರತ್ಯೇಕ ವಾಹನದಲ್ಲಿ ಬರಬಹುದು. ಅಷ್ಟೇ ಅಲ್ಲ ಸ್ಟ್ರಾಂಗ್‌ ರೂಂನಲ್ಲಿ ಇರಿಸಿದ ಬಳಿಕ ಅಭ್ಯರ್ಥಿಗಳು/ ಅವರ ಏಜೆಂಟರು/ ಪ್ರತಿನಿಧಿಗಳು (ಯರಾದರೂ ಒಬ್ಬರು ಮಾತ್ರ) ಅದೇ ಕೇಂದ್ರದಲ್ಲಿ ಅವರಿಗೆ ನಿಗದಿ ಪಡಿಸಿದ ಕೊಠಡಿಯಲ್ಲಿ ಇರಬಹುದು. ಭದ್ರತಾ ಕೊಠಡಿಯ ಸಿಸಿಟಿವಿಯನ್ನು ಅವರಿಗೆ ನೇರವಾಗಿ ವೀಕ್ಷಿಸಲು ಈ ಬಾರಿ ಅವಕಾಶ ಇದೆ.

ಮಂಗಳೂರಿನ ಎನ್‌ಐಟಿಕೆಯಲ್ಲಿ ಭದ್ರತಾ ಕೊಠಡಿ ಇದ್ದು, ಅದೇ ಕ್ಯಾಂಪಸ್‌ನಲ್ಲಿ ಅಭ್ಯರ್ಥಿ/ಪ್ರತಿನಿಧಿಗಳಿಗೆ ಮೇ 13ರ ವರೆಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿರುವುದು ಈ ಬಾರಿಯ ವಿಶೇಷ.

Advertisement
Advertisement

Udayavani is now on Telegram. Click here to join our channel and stay updated with the latest news.

Next