Advertisement
ಲೋಕಸಭೆ ಚುನಾವಣೆ ಸೋಲು ಹಿನ್ನೆಲೆಯಲ್ಲಿ ಕೆಪಿಸಿಸಿಯನ್ನು ವಿಸರ್ಜಿಸಿದ್ದರಿಂದ 3 ತಿಂಗಳು ಪದಾಧಿ ಕಾರಿಗಳಿಲ್ಲದೆ ಕೇವಲ ಅಧ್ಯಕ್ಷ, ಕಾರ್ಯಾಧ್ಯಕ್ಷರು ಮಾತ್ರ ಕಾರ್ಯ ನಿರ್ವಹಿಸಿದ್ದರು. ಈಗ ಡಿ.ಕೆ.ಶಿವಕುಮಾರ್ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಪಕ್ಷವನ್ನು ಬೇರು ಮಟ್ಟದಲ್ಲಿ ಬಲಗೊಳಿಸಲು ತಮ್ಮದೇ ಆದ ಹೊಸ ತಂಡ ರಚನೆಗೆ ತೀರ್ಮಾನಿಸಿದ್ದಾರೆ.
Related Articles
Advertisement
ಸಕ್ರಿಯ ಮಾಜಿ ಪದಾಧಿಕಾರಿಗಳಿಗೆ ಅವಕಾಶ: ಲೋಕಸಭೆ ಚುನಾವಣೆ ಸೋಲಿಗೆ ಕಾರಣ ನೀಡಿ ಪದಾಧಿಕಾರಿಗಳನ್ನು ವಿಸರ್ಜನೆ ಮಾಡಿದ್ದು ಅನೇಕ ಸಕ್ರಿಯ ಪದಾಧಿಕಾರಿಗಳ ಅಸಮಾಧಾನಕ್ಕೆ ಕಾರಣ ವಾಗಿತ್ತು. ನಾಯಕರ ನಡುವಿನ ಭಿನ್ನಾಭಿಪ್ರಾಯ ಹಾಗೂ ಜೆಡಿಎಸ್ ಜೊತೆಗಿನ ಹೊಂದಾಣಿಕೆ ಯಿಂದ ಪಕ್ಷ ಹೀನಾಯ ಸೋಲು ಅನುಭವಿಸಿದ್ದರೂ ಪದಾಧಿ ಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಿದ್ದಕ್ಕೆ ಕಾರ್ಯ ಕರ್ತರ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು.
ಈಗ ಡಿ.ಕೆ.ಶಿವಕುಮಾರ್ ಮಾಜಿ ಪದಾಧಿಕಾರಿಗಳಲ್ಲಿ ಸಕ್ರಿಯರಾಗಿ ದ್ದವರಿಗೆ ಮತ್ತೂಂದು ಅವಕಾಶ ಕಲ್ಪಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಶುಕ್ರವಾರ ನಡೆದ ಸಭೆಯಲ್ಲಿ ಮಾಜಿ ಪದಾಧಿ ಕಾರಿಗಳಿಗೆ ಅದೇ ಹುದ್ದೆಯಲ್ಲಿ ಮುಂದುವರಿಯುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದ್ದು, ಅವರ ಕಾರ್ಯ ವೈಖರಿಯನ್ನು ಪರಿಗಣಿಸಿ ಮುಂದೆ ಹೊಸ ತಂಡ ರಚನೆಯ ಸಂದರ್ಭದಲ್ಲಿ ಸಕ್ರಿಯರಾಗಿರುವವರನ್ನು ಪರಿಗಣಿಸಲು ಆಲೋಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಕೊರೊನಾ ಎಫೆಕ್ಟ್: ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಲು ಕೊರೊನಾ ವೈರಸ್ ಭೀತಿ ಎದುರಾಗಿದೆ. ರಾಜ್ಯ ಸರ್ಕಾರ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದು ಯಾವುದೇ ಸಭೆ, ಸಮಾರಂಭ ಮಾಡದಂತೆ ಆದೇಶ ಹೊರಡಿಸಿರುವುದರಿಂದ ಅಧಿಕಾರ ಸ್ವೀಕಾರ ಸಮಾರಂಭ ವಿಳಂಬವಾಗುತ್ತಿದೆ ಎಂದು ಹೇಳಲಾಗುತ್ತಿದೆ.
* ಶಂಕರ ಪಾಗೋಜಿ