Advertisement

ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಸುಂದರ್ ಲಕ್ಷ್ಮೀ ವಿವಾಹ

02:31 PM Mar 08, 2018 | Team Udayavani |

ಮಾಯಕೊಂಡ ಶಾಸಕ ಶಿವಮೂರ್ತಿ ನಾಯ್ಕ್‌ ಪುತ್ರಿ ಲಕ್ಷ್ಮೀ ನಾಯ್ಕ್​ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಮಾಸ್ತಿಗುಡಿ ನಿರ್ಮಾಪಕ ಸುಂದರ್​ಗೌಡ ಅವರ ಜತೆ ವಿವಾಹವಾಗಿರುವುದು ಬೆಳಕಿಗೆ ಬಂದಿದೆ.

Advertisement

ಚಾಮುಂಡಿ ಬೆಟ್ಟದಲ್ಲಿ ಇಬ್ಬರು ಮದುವೆಯಾಗಿರುವ ಚಿತ್ರ ಲಭಿಸಿದ್ದು, ಬುಧವಾರ ಲಕ್ಷ್ಮೀ ನಾಪತ್ತೆಯಾಗಿರುವ ಕುರಿತು ಶಾಸಕ ಶಿವಮೂರ್ತಿ ನಾಯ್ಕ್​ ಯಲಹಂಕ ನ್ಯೂಟೌನ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇನ್ನು ಶಾಸಕರ ಪುತ್ರಿ ನಾನು ನನ್ನ ಸ್ವಇಚ್ಛೆಯಿಂದಲೇ ಮದುವೆ ಆಗಿದ್ದೇನೆ. ಇದರಲ್ಲಿ ಯಾರ ಒತ್ತಡವೂ ಇಲ್ಲ. ನಮ್ಮಿಂದ ಯಾರಿಗೂ ತೊಂದರೆ ಆಗುವುದು ಬೇಡ. ನಾನು ಹಾಗೂ ಸುಂದರ್‌ಗೌಡ ಪರಸ್ಪರ ಪ್ರೀತಿಸಿ ಮದುವೆ ಆಗಿದ್ದೇವೆ ಎಂಬ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಇನ್ನು ಇವರ ಮದುವೆ ಚಾಮುಂಡಿ ಬೆಟ್ಟದಲ್ಲಿ ಆಗಿದೆ ಎನ್ನಲಾಗಿದೆ. ಆದರೆ ಇದುವರೆಗೂ ಮದುವೆ ಎಲ್ಲಿ ನಡೆದಿದೆ ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. 

Advertisement

Udayavani is now on Telegram. Click here to join our channel and stay updated with the latest news.

Next