Advertisement

ರೈತನಷ್ಟು ಕಷ್ಟ ಜೀವಿ ಮತ್ತೂಬ್ಬರಿಲ್ಲ

01:57 PM Apr 06, 2022 | Team Udayavani |

ವಿಜಯಪುರ: ಒಂದು ಕಡೆ ರೇಷ್ಮೆ ಬೆಳೆದು ಮತ್ತೂಂದು ಕಡೆ ಹೈನುಗಾರಿಕೆ ಮಾಡಿಕೊಂಡು ಕುಟುಂಬ ನಿರ್ವ ಹಣೆಯ ಜೊತೆ ಪಶುಪಾಲನೆಯನ್ನು ಮಾಡುತ್ತಿರುವ ರೈತ ನಿಜವಾಗಿಯೂ ಕಷ್ಟ ಜೀವಿ ಎಂದು ವೈದ್ಯಕೀಯ ಸಚಿವ ಡಾ.ಕೆ. ಸುಧಾಕರ್‌ ಹೇಳಿದರು.

Advertisement

ಪಟ್ಟಣ ಸಮೀಪದ ಯಲಿಯೂರು ಗ್ರಾಮದಲ್ಲಿ ನೂತನ ಪಶು ಚಿಕಿತ್ಸಾಲಯ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ರೈತರ ಕಷ್ಟವನ್ನು ಅರಿತ ಬಿಜೆಪಿ ಸರ್ಕಾರ ಒಂದು ಲೀಟರ್‌ ಹಾಲಿಗೆ 5 ರೂ. ಪ್ರೋತ್ಸಾಹ ಧನ ನೀಡುತ್ತಿದ್ದಾರೆ. 2008ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ. 2 ರೂ. ಪ್ರೋತ್ಸಾಹ ಧನ ನೀಡುವಲ್ಲಿ ಆರಂಭವಾಗಿ ಇಂದು ಒಂದು ಲೀಟರ್‌ ಹಾಲಿಗೆ 5 ರೂ. ಪ್ರೋತ್ಸಾಹ ಧನ ಸಿಗುವಂತಾಗಿದೆ. ಇದರೊಂದಿಗೆ ಹಾಲು ಒಕ್ಕೂಟವೂ ಪ್ರೋತ್ಸಾಹ ಧನ ನೀಡುತ್ತಿದ್ದಾರೆ. ಆದರೆ ಬೇಸಿಗೆಯಲ್ಲಿ ಹಾಲಿನ ಗುಣ ಮಟ್ಟ ಕಾಪಾಡಿಕೊಳ್ಳುವುದು ಅತಿ ಮುಖ್ಯವಾದ ವಿಚಾರ ಎಂದು ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೆವಾ ಇಲಾಖೆ ಇವರ ಸಹಯೋಗದಲ್ಲಿ ಆರ್‌.ಐ.ಡಿ.ಎಫ್. ಯೋಜನೆಯಡಿ ತಾಲೂಕಿನ ಯಲಿಯೂರು, ಆವತಿ, ತಿಂಡ್ಲು, ಕನ್ನಮಂಗಲ ಮತ್ತು ನಲ್ಲೂರು ಗ್ರಾಮಗಳಲ್ಲಿ ನೂತನ ಪಶು ಚಿಕಿತ್ಸಾಲಯ ಕಟ್ಟಡ ನಿರ್ಮಾಣಗೊಂಡಿದೆ. ಸಚಿವ ಎಂಟಿಬಿ ನಾಗರಾಜ್‌ ಮಾತನಾಡಿ, ರೈತ ದೇಶದ ಬೆನ್ನೆಲುಬು, ಅನ್ನದಾತ ಎಂದು ಹೇಳುತ್ತೇವೆ. ಸರ್ಕಾರವು ರೈತರಿಗೆ ಹಲವಾರು ಯೋಜನೆಗಳನ್ನು ನೀಡಿದೆ. ಆದರೂ ರೈತರಿಗೆ ಮತ್ತಷ್ಟು ಸೌಲಭ್ಯಗಳನ್ನು ಕಲ್ಪಿಸಬೇಕಿದೆ. ರೈತ ಇಂದು ಅಲ್ಪ ಮಟ್ಟಿಗೆ ನೆಮ್ಮದಿಯ ಜೀವನ ನಡೆಸುತ್ತಿದ್ದಾನೆ ಎಂದರೆ ಹೈನುಗಾರಿಕೆ ಅಥವಾ ರೇಷ್ಮೆ ಬೆಳೆಯುತ್ತಿರುವುದರಿಂದ. ಆದರೂ ರೇಷ್ಮೆ ಬೆಲೆ ಯಲ್ಲಿ ಆಗುತ್ತಿರುವ ಏರುಪೇರು ರೈತರನ್ನು ಕಂಗಾಲು ಮಾಡಿದೆ. ಒಂದಲ್ಲ ಒಂದು ರೀತಿಯಲ್ಲಿ ರೈತ ಕಷ್ಟ ಅನುಭವಿಸುತ್ತಿದ್ದಾನೆ. ಬೆಲೆ ಇದ್ದಾಗ ಬೆಳೆ ಇಲ್ಲ. ಬೆಳೆ ಚೆನ್ನಾಗಿ ಬಂದರೆ ಬೆಲೆ ಇರುವುದಿಲ್ಲ. ಎರಡೂ ಇದ್ದರೆ, ನೀರು, ವಿದ್ಯುತ್‌ ಸಮಸ್ಯೆ ಕಾಡುತ್ತದೆ. ರೈತರ ಜೀವನ ಎಂದಿಗೂ ಕಷ್ಟದಾಯಕ ಎಂದು ತಿಳಿಸಿದರು.

ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ಮನುಷ್ಯರಿಗೆ ಆರೋಗ್ಯದ ಸಮಸ್ಯೆ ಉಂಟಾದಾಗ ಆಂಬ್ಯುಲೆನ್ಸ್‌ ಸೇವೆ, ಚಿಕಿತ್ಸೆ ಸಿಗುತ್ತದೆಯೋ ಅದೇ ರೀತಿ ಪ್ರಾಣಿಗಳಿಗೂ ತಕ್ಷಣ ತುರ್ತು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್‌ ಮತ್ತು ಉತ್ತಮ ಗುಣಮಟ್ಟದ ಪಶು ವೈದ್ಯ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಯಲಿಯೂರು ಗ್ರಾಮಕ್ಕೆ ಎಲ್ಲ ರೀತಿಯ ಸೌಲಭ್ಯ ಒದಗಿಸಿದ್ದು, ಇಂದು ಪಶು ಚಿಕಿತ್ಸಾಲಯಕ್ಕೂ ನೂತನ ಕಟ್ಟಡ ಉದ್ಘಾಟನೆ ಮಾಡಿದ್ದೇವೆ ಎಂದು ತಿಳಿಸಿದರು.

Advertisement

ಈ ಸಂದರ್ಭದಲ್ಲಿ ಯಲಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸೊಣ್ಣೇಗೌಡ, ಉಪಾಧ್ಯಕ್ಷೆ ಪವಿತ್ರ ಸೋಮಶೇಖರ್‌, ಜಿಲ್ಲಾಧಿಕಾರಿ ಶ್ರೀನಿವಾಸ್‌, ಅಪರ ಜಿಲ್ಲಾಧಿಕಾರಿ ವಿಜಯಾ ರವಿಕುಮಾರ್‌, ಜಿಲ್ಲಾ ಪೊಲೀಸ್‌ ಅಧೀಕ್ಷಕ ಡಾ.ಕೋನವಂಶಿಕೃಷ್ಣ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರೇವಣಪ್ಪ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ನಾಗರಾಜ್, ಮುಖ್ಯ ಪಶು ವೈದ್ಯಾಧಿಕಾರಿ ಡಾ.ನಾರಾಯಣಸ್ವಾಮಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಸಂತಕುಮಾರ್‌, ತಹಶೀಲ್ದಾರ್‌ ಶಿವರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಅನಂತಕುಮಾರಿ, ಮಾಜಿ ಅಧ್ಯಕ್ಷ ಬಿ.ರಾಜಣ್ಣ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಶಶಿಕಲಾ, ಜೆಡಿಎಸ್‌ ತಾಲೂಕು ಅಧ್ಯಕ್ಷ ಮುನೇಗೌಡ, ಟಿ.ಎ.ಪಿ.ಸಿ.ಎಂ.ಎಸ್‌ ಅಧ್ಯಕ್ಷ ನಾರಾ ಯಣಸ್ವಾಮಿ, ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next