Advertisement

ಉಪ್ಪಿಟ್ಟಿನಲ್ಲಿತ್ತು ಹಾವಿನ ಮರಿ :ಆಹಾರ ಸೇವಿಸಿದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

06:16 PM Nov 18, 2021 | Team Udayavani |
ಉಪ್ಪಿಟ್ಟಿನಲ್ಲಿ ಹಾವಿನ ಮರಿ! ಯಾದಗಿರಿ ಜಿಲ್ಲೆಯ ಅಬ್ಬೆ ವಸತಿ ಶಾಲೆಯೊಂದರಲ್ಲಿ ಗುರುವಾರ ಬೆಳಗ್ಗೆ ಉಪ್ಪಿಟ್ಟು ಸೇವಿಸಿ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಬೆಳಗ್ಗಿನ ತಿಂಡಿ ಸೇವಿಸಿದ ಬಳಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಉಪ್ಪಿಟ್ಟಿನಲ್ಲಿ ಹಾವಿನ ಮರಿ ಬಿದ್ದಿರುವುದು ಕಂಡು ಬಂದಿದೆ.
  1. ಕಾಂಗ್ರೆಸ್ ನಲ್ಲಿ ನಾಯಕರೇ ಇಲ್ಲ: ಶೆಟ್ಟರ್
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಮುಖ ವಿರೋಧ ಪಕ್ಷವಾಗಿರುವ ಕಾಂಗ್ರೆಸ್‌ ನಲ್ಲಿ ಪರ್ಯಾಯ ನಾಯಕರೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್‌ ನಾಯಕರನ್ನು ತೀವ್ರವಾಗಿ ಟೀಕಿಸಿದರು.
  1. ವರ್ಷಕ್ಕೆ 32 ಕೋಟಿ ಸ್ಮಾರ್ಟ್‌ಫೋನ್‌ ಬಳಕೆದಾರರ ಹೆಚ್ಚಳ..!
ಕೇವಲ ಒಂದು ವರ್ಷದ ಅಂತರದಲ್ಲಿ ದೇಶದಲ್ಲಿ ಸ್ಮಾರ್ಟ್‌ಫೋನ್‌ ಬಳಕೆದಾರರ ಸಂಖ್ಯೆ ಸುಮಾರು 32 ಕೋಟಿ ಹೆಚ್ಚಾಗಿದೆ. ಹೌದು, 2020ರಲ್ಲಿ ದೇಶದಲ್ಲಿ ಸ್ಮಾರ್ಟ್‌ಫೋನ್‌ ಬಳಕೆದಾರರು 50 ಕೋಟಿ ಇದ್ದರು. ಈಗ ಅದು 82 ಕೋಟಿಗೆ ಏರಿಕೆಯಾಗಿದೆ ಎಂದು ಕಿಂಡ್ರೆಲ್‌ ಕಂಪನಿ ಸಿಇಒ ಮಾರ್ಟಿನ್‌ ಶ್ರೋಟರ್‌ ಮಾಹಿತಿ ನೀಡಿದ್ದಾರೆ.
  1. ಮತ್ತೊಬ್ಬ ಶಂಕಿತ ಉಗ್ರನ ಸೆರೆ
ಕರ್ನಾಟಕ ಸೇರಿ ದಕ್ಷಿಣ ಭಾರತದ ಯುವಕರನ್ನು ಐಸಿಸ್‌ಗೆ ನೇಮಿಸಿ ಸಿರಿಯಾಗೆ ಕಳುಹಿಸಿ ಉಗ್ರ ಸಂಘಟನೆಯನ್ನು ವಿಸ್ತರಿಸುತ್ತಿದ್ದ ಘಟನೆ ಆಗಾಗ ನಡೆಯುತ್ತಿದೆ. ಈ ಕಾರ್ಯ ಮಾಡುತ್ತಿದ್ದ ಬೆಂಗಳೂರಿನ ಮತ್ತೊಬ್ಬ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಜುಹಾಬ್‌ ಹಮೀದ್‌ ಶಕೀಲ್‌ ಮನ್ನಾ ಬಂಧಿತ ಆರೋಪಿಯಾಗಿದ್ದಾನೆ.
  1. ರಾಜಸ್ಥಾನ; ಅತ್ಯಾಚಾರ ಎಸಗಿದ ಬಿಜೆಪಿ ಶಾಸಕ
ರಾಜಸ್ಥಾನದ ಗೋಗುಂಡಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಪ್ರತಾಪ್ ಭೀಲ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈತನ ಮೇಲೆ ಕಳೆದ ಹತ್ತು ತಿಂಗಳಲ್ಲಿ ಎರಡು ಪ್ರಕರಣಗಳು ದಾಖಲಾಗಿರುವುದಾಗಿ ವರದಿ ತಿಳಿಸಿದೆ. ಕೆಲಸ ಕೊಡಿಸುವುದಾಗಿ ಭರವಸೆ ನೀಡಿ ಅತ್ಯಾಚಾರ ಎಸಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
  1. ಹೊಸ ಗ್ರಹವನ್ನು ಪತ್ತೆ ಹಚ್ಚಿದ ಇಸ್ರೋ
ಸೌರಮಂಡಲ­ದಿಂದ ಹೊರಗೆ ಗ್ರಹವೊಂದು ನಕ್ಷತ್ರವನ್ನು ಸುತ್ತುತ್ತಿರುವುದನ್ನು ಪತ್ತೆ ಹಚ್ಚಲಾಗಿದೆ. ಇಸ್ರೋದ ಪ್ರೊ| ಅಭಿಜಿತ್‌ ಚಕ್ರವರ್ತಿ ನೇತೃತ್ವದ ತಂಡವು ಈ ಗ್ರಹಮಂಡಲವನ್ನು ಪತ್ತೆ ಹಚ್ಚಿದೆ. ಇದಕ್ಕೆ ಯೂರೋಪ್‌ ಹಾಗೂ ಅಮೆರಿಕದ ಬಾಹ್ಯಾಕಾಶ ವಿಜ್ಞಾನಿಗಳೂ ಸಾಥ್‌ ನೀಡಿದ್ದಾರೆ.
  1. ನಟಿಯ ಬಾಡಿಗೆ ತಾಯ್ತನ
ಬಾಲಿವುಡ್ ನಟಿ, ಉದ್ಯಮಿ ಪ್ರೀತಿ ಜಿಂಟಾ ಮತ್ತು ಜೀನ್ ಗುಡ್ ಇನಫ್ ದಂಪತಿ ಬಾಡಿಗೆ ತಾಯ್ತನ ಪಡೆದಿದ್ದಾರೆ. ಈ ಮೂಲಕ ಅವಳಿ ಮಕ್ಕಳನ್ನು ಪಡೆದು ಪೋಷಕರಾಗಿ ಭಡ್ತಿ ಪಡೆದಿದ್ದಾರೆ. ಅವಳಿ ಮಕ್ಕಳನ್ನು ಪಡೆದಿರುವ ಬಗ್ಗೆ ಪ್ರೀತಿ ಜಿಂಟಾ ಸಾಮಾಜಿಕ ಜಾಲತಾಣದಲ್ಲಿ ವಿಷಯವನ್ನು ಹಂಚಿಕೊಂಡಿದ್ದಾರೆ.
  1. ಅಜೇಯ ಶತಕ: ಬಿಬಿಎಲ್ ನಲ್ಲಿ ಹೊಸ ದಾಖಲೆ ಬರೆದ ಸ್ಮೃತಿ ಮಂಧನಾ
ಆಸ್ಟ್ರೇಲಿಯಾದ ಮಹಿಳಾ ಬಿಗ್ ಬ್ಯಾಶ್ ಲೀಗ್ ನಲ್ಲಿ ಆಡುತ್ತಿರುವ ಭಾರತದ ಸ್ಮೃತಿ ಮಂಧನಾ ಅವರು ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಸಿಡ್ನಿ ಥಂಡರ್ಸ್ ಪರವಾಗಿ ಇವರು ಆಡುತ್ತಿದ್ದಾರೆ. ಮಂಧನಾ ಬುಧವಾರ ನಡೆದ ಪಂದ್ಯದಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ವಿರುದ್ಧ ಅಜೇಯ ಶತಕ ಬಾರಿಸಿ ಮಿಂಚಿದ್ದಾರೆ.
Advertisement

Udayavani is now on Telegram. Click here to join our channel and stay updated with the latest news.

Next