Advertisement

“ಮುಂದಿನ ಸಿಎಂ’ವರಿಷ್ಠರ ನಿರ್ಧಾರ: ಯಡಿಯೂರಪ್ಪ

10:51 PM Mar 15, 2023 | Team Udayavani |

ಬಾಗಲಕೋಟೆ: ಮುಂದಿನ ಸಿಎಂ ಯಾರು ಎನ್ನುವುದರ ಕುರಿತು ಪಕ್ಷದ ದಿಲ್ಲಿ ವರಿಷ್ಠರು ತೀರ್ಮಾನ ಮಾಡುತ್ತಾರೆ. ನನಗೆ 80 ವಯಸ್ಸು ಆಗಿದೆ. ಹೀಗಾಗಿ ಚುನಾವಣೆಗೆ ನಿಲ್ಲಬಾರದು ಎಂದು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಉತ್ತಮ ಆಡಳಿತಗಾರ. ಸಿಎಂ ಆಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಚುನಾವಣೆ ಮುಗಿದು ಬಹುಮತ ಬಂದ ಬಳಿಕ ಅಂತಿಮವಾಗಿ ದಿಲ್ಲಿ ವರಿಷ್ಠರು ಕೈಗೊಳ್ಳುವ ನಿರ್ಧಾರದಂತೆ ಮುಂದಿನ ಸಿಎಂ ಯಾರು ಎಂಬುದು ತೀರ್ಮಾನವಾಗಲಿದೆ.

ವಿಜಯ ಸಂಕಲ್ಪಕ್ಕೆ 5 ಲಕ್ಷ ಜನ
ಪಕ್ಷದಲ್ಲಿ ಎಲ್ಲವೂ ಸರಿ ಇದೆ. ಯಾವುದೇ ಸಮಸ್ಯೆ ಇಲ್ಲ. ಸೋಮಣ್ಣ ಬಗ್ಗೆ ನನಗೆ ಗೌರವವಿದೆ. ಅವರು ನಮ್ಮೊಂದಿಗೆ ಇರುತ್ತಾರೆ. ಅವರ ಸಹಕಾರದಿಂದಲೇ ನಾವು ಅಧಿಕಾರಕ್ಕೆ ಬರುತ್ತೇವೆ. ಮಾ. 25ರಂದು ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ನಡೆಯಲಿದೆ. ಪ್ರಧಾನಿ ಮೋದಿ ಆಗಮಿಸಲಿದ್ದು, ಸುಮಾರು 5 ಲಕ್ಷ ಜನ ಸೇರಲಿದ್ದಾರೆ. ವಿಜಯ ಸಂಕಲ್ಪ ಯಾತ್ರೆಗೆ ನಮ್ಮ ನಿರೀಕ್ಷೆಗೂ ಮೀರಿ ಜನ ಬೆಂಬಲ ದೊರೆಯುತ್ತಿದೆ ಎಂದರು.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next