Advertisement

ಮುಂದಿನ ವಾರ ಮಂಗಳೂರು ಜಿಲ್ಲೆಯಲ್ಲಿ ಮತ್ತಷ್ಟು ಬಿಗಿ ಕ್ರಮ : ಡಿಸಿ ರಾಜೇಂದ್ರ ಕೆ.ವಿ.

04:05 PM Jun 07, 2021 | Team Udayavani |

ಮಂಗಳೂರು: ಲಾಕ್ ಡೌನ್ ಕುರಿತಂತೆ ಜಿಲ್ಲೆಯಲ್ಲಿ ಈಗಿರುವ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಅವರು ಹೇಳಿದರು.

Advertisement

ಇಂದು ( ಜೂನ್ 07) ತಮ್ಮ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿರುವ ಅವರು, ಅನ್ ಲಾಕ್ ಮಾಡ ಬೇಕಾದರೆ ಪಾಸಿಟಿವಿಟಿ ದರ  ಕಡಿಮೆ ಮಾಡುವ ಅಗತ್ಯವಿದೆ. ಹಾಗಾಗಿ ಮುಂದಿನ 1 ವಾರ ಕಾಲ ಜನರ ಅನಗತ್ಯ ಸಂಚಾರವನ್ನು ನಿಯಂತ್ರಿಸಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸುವ ನಿಟ್ಟಿನಲ್ಲಿ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ 10 ತಂಡ ಸೇರಿದಂತೆ ಜಿಲ್ಲಾದ್ಯಂತ 150 ತಪಾಸಣಾ ತಂಡಗಳನ್ನು ರಚನೆ ಮಾಡಲಾಗಿದೆ. ಇದಕ್ಕೆ ಜನರು ಸಹಕಾರ ನೀಡ ಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next