Advertisement

ಎನ್‌ಐಎ ದಾಳಿ: ಕಾಪುವಿನಲ್ಲಿ ರಸ್ತೆ ತಡೆದು ದಿಢೀರ್‌ ಪ್ರತಿಭಟನೆ; ಹಲವರು ವಶಕ್ಕೆ

02:10 PM Sep 22, 2022 | Team Udayavani |

ಕಾಪು : ಪಿಎಫ್ಐ ಹಾಗೂ ಎಸ್‌ಡಿಪಿಐ ಕಚೇರಿ ಮೇಲೆ  ಎನ್‌ಐಎ ಅಧಿಕಾರಿಗಳು ದಾಳಿ ಹಾಗೂ ಮುಖಂಡರ ಬಂಧನವನ್ನು ವಿರೋಧಿಸಿ ಪಿಎಫ್ಐ ಜಿಲ್ಲಾಧ್ಯಕ್ಷ ಫಯಾಜ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರ ಕಾಪುವಿನಲ್ಲಿ ರಸ್ತೆ ತಡೆ ನಡೆಸಿ, ಪ್ರತಿಭಟನೆ ನಡೆಸಿದರು.

Advertisement

ಇದನ್ನೂ ಓದಿ: ದೀರ್ಘಾಯುಷಿ ಎಂಬ ಖ್ಯಾತಿಯ ಹುಲಿ ‘ಹನುಮ’ ಇನ್ನಿಲ್ಲ

ಯಾವುದೇ ರೀತಿಯಲ್ಲಿ ಪೊಲೀಸ್ ಅನುಮತಿ ಪಡೆಯದೆ ಹೆದ್ದಾರಿ ತಡೆ ನಡೆಸಿದ ಪಿಎಫ್ಐ ಜಿಲ್ಲಾಧ್ಯಕ್ಷ ಫಯಾಝ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾಪು ವೃತ್ತ ನಿರೀಕ್ಷ ಕೆ.ಸಿ ಪೂವಯ್ಯ, ಕಾಪು ಎಸೈ ಶ್ರೀ ಶೈಲ ಮುರಗೋಡ ಹಾಗು ಸಿಬ್ಬಂದಿಗಳು ಸ್ಥಳದಲ್ಲಿ ಬಂದೊಬಸ್ತ್ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next