Advertisement

Rameshwaram Cafe ಸ್ಫೋ*ಟ; ನಾಲ್ವರ ವಿರುದ್ಧ ಎನ್ ಐಎ ಚಾರ್ಜ್ ಶೀಟ್

06:43 PM Sep 09, 2024 | Team Udayavani |

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಎನ್ ಐಎ(The National Investigation Agency) ಸೋಮವಾರ (ಸೆ9) ಆರೋಪ ಪಟ್ಟಿ ಸಲ್ಲಿಸಿದೆ.

Advertisement

ಪ್ರಸ್ತುತ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳಾದ ಮುಸ್ಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮಥೀನ್ ಅಹ್ಮದ್ ತಾಹಾ, ಮಾಜ್ ಮುನೀರ್ ಅಹ್ಮದ್ ಮತ್ತು ಮುಝಮ್ಮಿಲ್ ಶರೀಫ್ ವಿರುದ್ಧ ಚಾರ್ಜ್ ಶೀಟ್ ದಾಖಲು ಮಾಡಲಾಗಿದೆ ಎಂದು ಎನ್‌ಐಎ ಹೇಳಿಕೆಯಲ್ಲಿ ತಿಳಿಸಿದೆ.

ಇಬ್ಬರು ಪ್ರಮುಖ ಆರೋಪಿಗಳಾದ ತಾಹಾ ಮತ್ತು ಶಾಜಿಬ್ ಕ್ರಿಪ್ಟೋ ಕರೆನ್ಸಿ ಮೂಲಕ ತಮ್ಮ ಹ್ಯಾಂಡ್ಲರ್‌ನಿಂದ ಹಣವನ್ನು ಪಡೆದಿದ್ದಾರೆ. ಬೆಂಗಳೂರಿನಲ್ಲಿ ವಿವಿಧ ಹಿಂಸಾ ಕೃತ್ಯಗಳನ್ನು ನಡೆಸಲು ಬಳಸುತ್ತಿದ್ದರು ಎಂದು ಎನ್‌ಐಎ ತನಿಖೆಯಿಂದ ತಿಳಿದುಬಂದಿದೆ.

ಜನವರಿ 22 ರಂದು ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾ ಸಮಾರಂಭದ ದಿನ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಐಇಡಿ ದಾಳಿ ನಡೆಸಲು ವಿಫಲವಾಗಿರುವುದೂ ಇದರಲ್ಲಿ ಸೇರಿದೆ. ರಾಮೇಶ್ವರಂ ಕೆಫೆ ಸ್ಫೋಟವನ್ನು ಯೋಜಿಸಿದ್ದರು ಎಂದು ಹೇಳಿಕೆ ತಿಳಿಸಿದೆ. ಬೆಂಗಳೂರಿನ ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next