Advertisement

NIA: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ- ಐವರು ಆರೋಪಿಗಳ ಪತ್ತೆಗೆ ಎನ್‌ಐಎ ಮನವಿ

12:22 AM Dec 16, 2023 | Team Udayavani |

ಸುಳ್ಯ: ಕಳೆದ ವರ್ಷದ ಜುಲೈನಲ್ಲಿ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಯುವ ನಾಯಕ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮನವಿ ಮಾಡಿದೆ.

Advertisement

ಬೆಳ್ಳಾರೆಯ ಬೂಡು ನಿವಾಸಿ ಎಂ.ಡಿ.ಮುಸ್ತಫ‌, ನೆಕ್ಕಿಲಾಡಿ ಅಗ್ನಾಡಿ ನಿವಾಸಿ ಮಸೂದ್‌ ಅಗ್ನಾಡಿ ಮಸೂದ್‌ ಕೆ.ಎ., ಬಂಟ್ವಾಳ ತಾಲೂಕಿನ ಕೊಡಾಜೆ ನಿವಾಸಿ ಮೊಹಮ್ಮದ್‌ ಶರೀಫ್ ಕೊಡಾಜೆ, ಸುಳ್ಯದ ಕಲ್ಲುಮುಟ್ಲು ನಿವಾಸಿ ಉಮ್ಮರ್‌ ಆರ್‌. ಉಮ್ಮರ್‌ ಫಾರೂಕ್‌, ಬೆಳ್ಳಾರೆ ನಿವಾಸಿ ಅಬೂಬಕ್ಕರ್‌ ಸಿದ್ದಿಕ್‌ ಎನ್ನುವ ಐವರು ಆರೋಪಿಗಳು ಈ ಪ್ರಕರಣದಲ್ಲಿ ಭಾಗಯಾದ ಆರೋಪದಲ್ಲಿ ಎನ್‌ಐಎ ತಂಡಕ್ಕೆ ಬೇಕಾದವರಾಗಿದ್ದು, ಈ ಆರೋಪಿಗಳು ಕಂಡುಬಂದಲ್ಲಿ ಮಾಹಿತಿ (ವಾಟ್ಸ್‌ಆ್ಯಪ್‌ 9497715294) ನೀಡುವಂತೆ ತಿಳಿಸಲಾಗಿದೆ.

ಜನರಲ್ಲಿ ಹಾಗೂ ಸಮಾಜದಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ 2022ರ ಜು. 26ರಂದು ರಾತ್ರಿ ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಈಗಾಗಲೇ ಹಲವರನ್ನು ಬಂಧಿಸಿದ್ದು, ಇನ್ನೂ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಎನ್‌ಐಎ ನಿರಂತರ ತನಿಖೆ, ಕಾರ್ಯಚರಣೆ ಮುಂದುವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next