Advertisement

ಸಿಲಿಂಡರ್ ಪ್ರಕರಣ:ಕರ್ನಾಟಕ ಸೇರಿ 60 ಸ್ಥಳಗಳಲ್ಲಿ ಶಂಕಿತ ಐಸಿಸ್ ಬೆಂಬಲಿಗರ ವಿರುದ್ಧ NIA ಶೋಧ

10:55 AM Feb 15, 2023 | Team Udayavani |

ನವದೆಹಲಿ: ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಬುಧವಾರ (ಫೆ.15) ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ಸುಮಾರು 60ಕ್ಕೂ ಅಧಿಕ ಸ್ಥಳಗಳಲ್ಲಿ ಶಂಕಿತ ಐಸಿಸ್ ಬೆಂಬಲಿಗರ ವಿರುದ್ಧ ಶೋಧ ಕಾರ್ಯ ನಡೆಸುತ್ತಿದೆ ಎಂದು ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಇಂಥ ಕೆಟ್ಟ ರಾಜಕೀಯವನ್ನು ನಾನೆಂದೂ ನೋಡಿರಲಿಲ್ಲ: ಬಿಜೆಪಿ ವಿರುದ್ಧ ಸಿದ್ದು ಆಕ್ರೋಶ

2022ರಲ್ಲಿ ಕೊಯಂಬತ್ತೂರಿನಲ್ಲಿ ಸಂಭವಿಸಿದ್ದ ಕಾರು ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಈ ಶೋಧ ಕಾರ್ಯ ಕೈಗೊಂಡಿರುವುದಾಗಿ ವರದಿ ವಿವರಿಸಿದೆ. ಕೋಮು ಸೂಕ್ಷ್ಮ ಪ್ರದೇಶವಾದ ಉಕ್ಕಡಂ ಪ್ರದೇಶದ ಕೊಟ್ಟೈ ಈಶ್ವರ ದೇವಸ್ಥಾನದ ಮುಂಭಾಗದಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಶಂಕಿತ ಉಗ್ರ ಜಮೇಶಾ ಮುಬೀನ್ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸಾವನ್ನಪ್ಪಿದ್ದ ಘಟನೆ ನಡೆದಿತ್ತು.

ದೀಪಾವಳಿ ಹಬ್ಬಕ್ಕೂ ಮುನ್ನ ಈ ಸ್ಫೋಟ ನಡೆದಿದ್ದು, ಇದೊಂದು ಒಂಟಿ ತೋಳದ ದಾಳಿಯ ಸಂಚು ಎಂದು ವಿಶ್ಲೇಷಿಸಲಾಗಿತ್ತು. ಈ ಘಟನೆಗೂ ಮುನ್ನ ಕೇರಳ ಪೊಲೀಸರು ಮುಬೀನ್ ನಿಂದ 75ಕೆಜಿ ಸ್ಫೋಟಕ ಹಾಗೂ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದರು ಎಂದು ಪಿಟಿಐ ವರದಿ ಮಾಡಿದೆ.

ಇ-ಕಾಮರ್ಸ್ ಫ್ಲ್ಯಾಟ್ ಫಾರಂನಲ್ಲಿ ಸ್ಫೋಟಕ ಖರೀದಿಸಲು ನೆರವು ನೀಡಿದ್ದ ಆರು ಮಂದಿಯನ್ನು ಬಂಧಿಸಲಾಗಿತ್ತು ಎಂದು ವರದಿ ಹೇಳಿದೆ. ಆ ನಿಟ್ಟಿನಲ್ಲಿ ಎನ್ ಐಎ ಇದೀಗ ಮತ್ತೆ ಶಂಕಿತ ಐಸಿಸ್ ಬೆಂಬಲಿಗರ ವಿರುದ್ಧ ಕಾರ್ಯಾಚರಣೆಗೆ ಮುಂದಾಗಿರುವುದಾಗಿ ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next