Advertisement

Nipah virus: ಅವಶ್ಯವಿದ್ದಲ್ಲಿ ಮಾತ್ರ ಕೇರಳ ಪ್ರಯಾಣಕ್ಕೆ ಸೂಚನೆ

12:15 AM Jul 26, 2024 | Team Udayavani |

ಬೆಂಗಳೂರು: ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಜು.7ರಂದು ನಿಫಾ ವೈರಸ್‌ ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ ಸೋಂಕು ವರದಿಯಾದ ಜಿಲ್ಲೆಗೆ ಅತ್ಯಂತ ಅವಶ್ಯವಿದ್ದಲ್ಲಿ ಮಾತ್ರ ಪ್ರಯಾಣಿಸಿ ಎಂದು ರಾಜ್ಯ ಆರೋಗ್ಯ ಇಲಾಖೆಯು ಸೂಚನೆ ನೀಡಿದೆ.

Advertisement

ನಿಫಾ ರೋಗಲಕ್ಷಣಗಳನ್ನು ಹೊಂದಿದ್ದ ಮಲಪ್ಪುರಂನ 14 ವರ್ಷದ ಬಾಲಕ, ಪೆರಿಂತಲ್ಮನ್ನಾದಲ್ಲಿನ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗೆ ಕೋಯಿಕ್ಕೋಡ್‌ನ‌ ಉನ್ನತ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗುವ ಮೊದಲೇ ಸಾವನ್ನಪ್ಪಿದ್ದಾನೆ. ರೋಗಿಯ ಮಾದರಿಗಳನ್ನು ಎನ್‌ಐವಿ, ಪುಣೆಗೆ ಕಳುಹಿಸಲಾಗಿತ್ತು. ಮಾದರಿಯಲ್ಲಿ ನಿಫಾ ವೈರಸ್‌ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಈ ಹಿಂದೆ 2023ರಲ್ಲಿ ಕೇರಳದ ಕೋರಯಿಕ್ಕೋಡ್‌ ಜಿಲ್ಲೆಯಲ್ಲಿ ಏಕಾಏಕಿ ನಿಫಾ ಪ್ರಕರಣಗಳು ವರದಿಯಾಗಿದ್ದರೂ ಇಲ್ಲಿಯವರೆಗೆ ಕರ್ನಾಟಕದಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ ಎಂದು ಇಲಾಖೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next