Advertisement

ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ : ಸಚಿವ ಸುಧಾಕರ್ ಘೋಷಣೆ

10:24 AM Dec 26, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಿ ಭಾನುವಾರ ಸರಕಾರ ಆದೇಶ ಹೊರಡಿಸಿದೆ.

Advertisement

ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಸಚಿವ ಡಾ. ಸುಧಾಕರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಡಿ. 28 ರಿಂದ ರಾತ್ರಿ 10 ರಿಂದ ಬೆಳಗ್ಗೆ 5 ರ ವರೆಗೆ 10 ದಿನ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕವಾಗಿ ಹೊಸ ವರ್ಷ ಆಚರಣೆಗೆ ಬ್ರೇಕ್ ಹಾಕಲಾಗಿದೆ.ಸಭೆ ಸಮಾರಂಭಗಳಲ್ಲಿ ಶೇ. 50 ರಷ್ಟು ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಹೊಸ ವರ್ಷಾಚರಣೆ ವೇಳೆ ಕೋವಿಡ್ ಮತ್ತು ಒಮಿ ಕ್ರಾನ್ ಆತಂಕದ ಹಿನ್ನಲೆ ಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next