Advertisement

H. D. Kumaraswamy: ನಿಖಿಲ್‌ಗೆ ಅಭಿಮನ್ಯು ಪಾತ್ರ ಬೇಡ ಅರ್ಜುನನ ಪಾತ್ರ

12:35 AM Oct 28, 2024 | Team Udayavani |

ಹಾಸನ: “ಕುರುಕ್ಷೇತ್ರ’ ಚಿತ್ರದಲ್ಲಿ ನನ್ನ ಮಗ ನಿಖಿಲ್‌ಕುಮಾರಸ್ವಾಮಿ ಅಭಿಮನ್ಯುವಿನ ಪಾತ್ರ ಮಾಡಿದ್ದ. ಮಂಡ್ಯ ಮತ್ತು ರಾಮನಗರದ ಚುನಾವಣೆಯಲ್ಲಿ ಕಾಂಗ್ರೆಸ್ಸಿನವರ ಕುತಂತ್ರದಿಂದ ಸೋಲನುಭವಿಸಿದ. ಆದರೆ, ಈ ಬಾರಿ ಉಪ ಚುನಾವಣೆಯಲ್ಲಿ ಚನ್ನಪಟ್ಟಣದ ಜನತೆ ನಿಖೀಲ್‌ಗೆ ಅಭಿಮನ್ಯುವಿನ ಪಾತ್ರ ಬೇಡ ಎಂದು ಅರ್ಜುನನ ಪಾತ್ರ ನೀಡಿದ್ದಾರೆ.

Advertisement

ನಮ್ಮ ವಿರೋಧಿಗಳು ಎಷ್ಟೇ ಕುತಂತ್ರದ ರಾಜಕಾರಣ ಮಾಡಿದರೂ ಚನ್ನಪಟ್ಟಣದ ಜನತೆ ಮತ್ತು ಎನ್‌ಡಿಎ ಕಾರ್ಯಕರ್ತರು ನಿಖೀಲ್‌ಗೆ ಗೆಲುವು ನೀಡುತ್ತಾರೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ವಿರೋಧಿಗಳಿಗೆ ಟಾಂಗ್‌ ನೀಡಿದರು.

ಹಾಸನಾಂಬೆ ದರ್ಶನ ಪಡೆದ ಅನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚನ್ನಪಟ್ಟಣ ಉಪ ಚುನಾವಣೆ ಫ‌ಲಿತಾಂಶ ರಾಜ್ಯ ರಾಜಕಾರಣದ ಮುಂದಿನ ದಿಕ್ಸೂಚಿಯಾಗಲಿದೆ. ವಿರೋಧಿಗಳ ಹೇಳಿಕೆ ಗಮನಿಸಿದ್ದೇನೆ, ಅವರ ಹೇಳಿಕೆಗೆ ಚನ್ನಪಟ್ಟಣದ ಜನತೆಯೇ ಉತ್ತರ ನೀಡುತ್ತಾರೆ ಎಂದು ಹೇಳಿದರು.

ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಇರಲಿಲ್ಲವೋ ಏನೋ, ಬಿಜೆಪಿಯಲ್ಲಿದ್ದವರನ್ನು ಕನಕಪುರ ಸಹೋದರರು ಕರೆದೊಯ್ದು ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next