Advertisement

Nikhil Kumar: ನನ್ನ ಬಳಿಯಿರುವ ಹುಲಿ ಉಗುರು ಅಸಲಿಯಲ್ಲ.. ನಿಖಿಲ್‌ ಕುಮಾರ್‌ ಸ್ಪಷ್ಟನೆ

03:41 PM Oct 25, 2023 | Team Udayavani |

ಬೆಂಗಳೂರು: ಹುಲಿಯ ಉಗುರು ಧರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆಧುನಿಕ ಕೃಷಿಕ, ಬಿಗ್‌ ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್‌ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ವಿಚಾರದಲ್ಲಿ ಅನೇಕರ ಹೆಸರು ಕೇಳಿಬಂದಿದೆ.

Advertisement

ನಟ ದರ್ಶನ್‌, ವಿನಯ್‌ ಗುರೂಜಿ ಹಾಗೂ ನವರಸ ನಾಯಕ ಜಗ್ಗೇಶ್‌ ಅವರ ಹೆಸರು ಕೂಡ ಹುಲಿ ಉಗುರಿನ ವಿಚಾರದಲ್ಲಿ ಕೇಳಿ ಬರುತ್ತಿದೆ. ಇದರೊಂದಿಗೆ ನಟ ನಿಖಿಲ್‌ ಕುಮಾರ್‌ ಅವರು ಹುಲಿ ಉಗುರಿನ ಪೆಂಡೆಂಟ್‌ ಧರಿಸಿರುವ ಫೋಟೋವೊಂದು ವೈರಲ್ ಆಗಿತ್ತು.

ಹುಲಿ ಉಗುರು ಧರಿಸಿರುವವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹ ವ್ಯಕ್ತವಾದ ಬೆನ್ನಲ್ಲೇ, ಈ ಬಗ್ಗೆ ನಟ ನಿಖಿಲ್‌ ಕುಮಾರ್‌ ಟ್ವೀಟ್‌ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೋರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ.

ನಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ ಎಂದು ಟ್ವೀಟ್‌ ಮಾಡಿ ಸ್ಪಷ್ಟನೆ ನೀಡಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next