Advertisement

ನಿಖಿಲ್‌ ಹೆಸರಿನ ಗೊಂದಲ : ನಾಮಪತ್ರ ತಿರಸ್ಕರಿಸುವಂತೆ ದೂರು

09:26 AM Apr 02, 2019 | Hari Prasad |

ಮಂಡ್ಯ: ಈ ಕ್ಷೇತ್ರದ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರ ನಾಮಪತ್ರ ಗೊಂದಲ ವಿಚಾರ ಇನ್ನಷ್ಟು ಕಗ್ಗಂಟಾಗಿದೆ. ನಿಖಿಲ್‌ ಅವರು ಸಲ್ಲಿಸಿರುವ ನಾಮಪತ್ರ ಕ್ರಮಬದ್ಧವಾಗಿಲ್ಲದ ಕಾರಣ ಅದನ್ನು ತಿರಸ್ಕರಿಸಬೇಕು ಎಂದು ಮಂಡ್ಯ ಕ್ಷೇತ್ರದ ಚುನಾವಣಾಧಿಕಾರಿಯವರೂ ಆಗಿರುವ ಜಿಲ್ಲಾಧಿಕಾರಿಯವರಿಗೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ ಅವರು ದೂರು ಸಲ್ಲಿಸಿದ್ದರು.

Advertisement

ಇದೀಗ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಇನ್ನೊಂದು ಸಂಕಷ್ಟ ಎದುರಾಗಿದೆ. ಮತದಾರರ ಪಟ್ಟಿಯಲ್ಲಿ ಹಾಗೂ ನಿಖೀಲ್‌ ಅವರು ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಬೇರೆ ಬೇರೆ ಹೆಸರಿದೆ ಎಂದು ಬಿ.ಎಸ್‌. ಗೌಡ ಎಂಬುವವರು ಚುನಾವಣಾಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ರಾಮನಗರದಲ್ಲಿರುವ ಮತದಾರರ ಪಟ್ಟಿಯಲ್ಲಿ ನಿಖಿಲ್‌ ಕುಮಾರಸ್ವಾಮಿ ಎಂದು ಹೆಸರು ದಾಖಲಾಗಿದೆ ಆದರೆ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ನೀಡಿರುವ ಪ್ರಮಾಣ ಪತ್ರದಲ್ಲಿ ನಿಖಿಲ್‌ ಕೆ. ಎಂದು ಮಾತ್ರವೇ ಹೆಸರು ನಮೂದಾಗಿದೆ. ಇದು ಗೊಂದಲಕ್ಕೆ ಕಾರಣವಾಗಿರುವುದರಿಂದ ಮತ್ತು ತನ್ನ ಹೆಸರಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ನೀಡಿರುವ ಕಾರಣಕ್ಕೆ ನಿಖಿಲ್‌ ಕುಮಾರಸ್ವಾಮಿ ಅವರ ನಾಮಪತ್ರವನ್ನು ತಿರಸ್ಕರಿಸಬೇಕು ಎಂದು ದೂರುದಾರರು ತನ್ನ ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತಾಗಿ ಚುನಾವಣಾ ಆಯೋಗ ಯಾವ ಕ್ರಮ ಕೈಗೊಳ್ಳಲಿದೆ ಎಂಬ ಕುತೂಹಲ ಇದೀಗ ಕ್ಷೇತ್ರದ ಜನರಲ್ಲಿ ಮನೆಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next