Advertisement

ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ Nikhil Kumaraswamy ರಾಜೀನಾಮೆ

08:02 AM May 25, 2023 | Team Udayavani |

ಬೆಂಗಳೂರು: ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿದ್ದಾರೆ.

Advertisement

ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ನೀಡಿದ್ದು, ಆ ಪತ್ರದಲ್ಲಿ ಪಕ್ಷದ ಜತೆ ಸದಾ ನಿಲ್ಲುವೆ ಎಂದಿದ್ದು, ಹೊಸ ನಾಯಕತ್ವಕ್ಕೆ ಅವಕಾಶ ಕೊಡಲು ಮನವಿ ಮಾಡಿದ್ದಾರೆ.

ಸೋಲಿನಿಂದ ಕಂಗೆಡದೆ ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ, ಸೋಲೇ ಅಂತಿಮವಲ್ಲ ಎಂದು ಹೇಳಿದ್ದಾರೆ.  ಪಕ್ಷ ಮರು ನಿರ್ಮಾಣದ ದಿಸೆಯಲ್ಲಿ ರಾಜೀನಾಮೆ ನೀಡುತ್ತಿದ್ದೇನೆ. ಪಕ್ಷ ಕಟ್ಟುವ ಕೆಲಸದಲ್ಲಿ ನಾನು ಎಂದೂ ಹಿಂಜರಿಯಲಾರೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next