Advertisement
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಖೀಲ್ ಅವರ ಸಿನಿಮಾ ಚರಿಷ್ಮಾವನ್ನು ಪಕ್ಷಕ್ಕೆ ಬಳಸಿಕೊಳ್ಳಲಾಗುವುದು. ಎಚ್. ಡಿ.ಕುಮಾರಸ್ವಾಮಿ ಅವರ ಪರವಾಗಿ ಅವರ ಮಗ ನಿಖೀಲ್ ರಾಜಕೀಯದಲ್ಲಿ ಹೆಗಲು ಕೊಡುವುದರಲ್ಲಿ ತಪ್ಪೇನೂ ಇಲ್ಲ. ಪಕ್ಷದ ನೆರವಿಗೆ ನಿಖೀಲ್ ಬರುವುದಿದ್ದರೆ ಸಂತೋಷ ಎಂದರು.
ಕ್ಷೇತ್ರದಲ್ಲಿ ಪ್ರಜ್ವಲ್ ಸ್ಪರ್ಧೆಯನ್ನು ಪರೋಕ್ಷವಾಗಿ ತಳ್ಳಿ ಹಾಕಿದರು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ. ಆದರೆ, ಪಕ್ಷದಲ್ಲಿ ಲೋಕಸಭೆಗೆ ಹಾಸನ ಕ್ಷೇತ್ರದಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಕೊರತೆ ಇದೆ. ಹಾಸನ ಜಿಲ್ಲೆಯ ಎಲ್ಲಾ ಜೆಡಿಎಸ್ ಶಾಸಕರು ಸಮ್ಮತಿಸಿದರೆ ಪ್ರಜ್ವಲ್ ಅವರನ್ನು ಸ್ಪರ್ಧೆಗಿಳಿಸುವ ಉದ್ದೇಶವಿದೆ. ಆತನಿಗೆ ಲೋಕಸಭೆಯಲ್ಲಿ ಮಾತನಾಡುವ ಛಾತಿಯೂ ಇದೆ ಎಂದು ಹೇಳಿದರು.