Advertisement

Wayanad: 14 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಕಮರಿಗೆ ಬಿದ್ದು 9 ಮಂದಿ ಸಾವು

06:54 PM Aug 25, 2023 | Team Udayavani |

ಕೇರಳ: ವಯನಾಡು ಜಿಲ್ಲೆಯ ಮನಂತವಾಡಿಯಲ್ಲಿ ಶುಕ್ರವಾರ ಜೀಪ್ ಕಮರಿಗೆ ಉರುಳಿ ಬಿದ್ದ ಪರಿಣಾಮ ಒಂಬತ್ತು ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

Advertisement

ಮಧ್ಯಾಹ್ನ 3.30ರ ಸುಮಾರಿಗೆ ತಲಪ್ಪುಳ ಕನ್ನೋತ್ಮಾಲಾ ಬಳಿ ಅಪಘಾತ ಸಂಭವಿಸಿದೆ. ಸುಮಾರು ಆರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡಿದ್ದ ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ದೀಪು ಟೀ ಟ್ರೇಡಿಂಗ್ ಕಂಪನಿಗೆ ಸೇರಿದ ಜೀಪ್‌ನಲ್ಲಿ 12 ಮಂದಿ ಕಾರ್ಮಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ಮಾನಂತವಾಡಿಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿರ್ದೇಶನದ ಮೇರೆಗೆ ಕೋಝಿಕ್ಕೋಡ್‌ನಲ್ಲಿರುವ ಅರಣ್ಯ ಸಚಿವ ಎಕೆ ಶಸೀಂದ್ರನ್ ಅವರು ರಕ್ಷಣಾ ಕಾರ್ಯಾಚರಣೆಯ ಮುಂದಾಳತ್ವವನ್ನು ವಹಿಸಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಸಂತಾಪ ಸೂಚಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next