Advertisement
ಈ ವೈರಸ್ನಿಂದಾಗಿ ಮೊದಲು ಸಾವಿಗೀಡಾದ ಸಹೋದರರ ತಂದೆ ಗುರುವಾರ ಬೆಳಗ್ಗೆ ಮೃತರಾಗಿದ್ದಾರೆ. ಕಳೆದೊಂದು ವಾರದಿಂದ ವಿ. ಮೂಸಾ (61) ಅವರು ಇಲ್ಲಿನ ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದರು. ಗುರುವಾರ ಬೆಳಗ್ಗೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಕೇರಳದಲ್ಲಿ ಆತಂಕ ಸೃಷ್ಟಿಸಿರುವ ನಿಫಾವೈರಸ್ ಇದೀಗ ಹಿಮಾಚಲ ಪ್ರದೇಶದಲ್ಲೂ ಭೀತಿಗೆ ಕಾರಣವಾಗಿದೆ. ಇಲ್ಲಿನ ಶಾಲೆಯೊಂದರಲ್ಲಿ ಗುರುವಾರ ಸತ್ತು ಬಿದ್ದಿದ್ದ 18 ಬಾವಲಿಗಳು ಪತ್ತೆಯಾಗಿವೆ. ಇದೀಗ ಸ್ಥಳೀಯರಲ್ಲಿ ಭಯ ಹುಟ್ಟಿಸಿದ್ದು, ನಿಫಾ ಸೋಂಕು ಹರಡದಂತೆ ಸರಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಘೋಷಿಸಿದೆ. ಸತ್ತ ಬಾವಲಿಗಳ ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಇನ್ನಷ್ಟೇ ಬರಬೇಕಿದೆ. ಆತಂಕ ಪಡಬೇಕಾಗಿಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ.