Advertisement

ಬೊಮ್ಮಾಯಿ ನಾಯಕತ್ವ ವಹಿಸಿದ ಒಂದೇ ತಿಂಗಳಲ್ಲಿ ಸಿಕ್ಸರ್ ಹೊಡೆದಿದ್ದಾರೆ: ಮುರುಗೇಶ್ ನಿರಾಣಿ

03:10 PM Sep 06, 2021 | Team Udayavani |

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ನಾಯಕತ್ವ ವಹಿಸಿದ ಒಂದೇ ತಿಂಗಳಲ್ಲಿ ಸಿಕ್ಸರ್ ಹೊಡೆದಿದ್ದಾರೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದರು.

Advertisement

ಪಾಲಿಕೆ ಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ ಅವರು, ಬೆಳಗಾವಿ ಮತ್ತು ಹುಬ್ಬಳ್ಳಿ ಮಹಾನಗರ ಫಲಿತಾಂಶ ಸಂಪೂರ್ಣ ಬಹುಮತ ಬಂದಿದೆ.  ಕಲಬುರ್ಗಿಯಲ್ಲಿ 23 ಸ್ಥಾನ ಬಿಜೆಪಿ ಗೆದ್ದಿದೆ. ಸಂಸದರು ಹಾಗೂ ಶಾಸಕರು ಇರುವುದರಿಂದ ಮೊದಲ ಬಾರಿಗೆ ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯುತ್ತೇವೆ ಎಂದರು.

ರಾಜ್ಯದಲ್ಲಿ ಯಡಿಯೂರಪ್ಪ ಅವರ ಮಾರ್ಗದರ್ಶನ, ಬೊಮ್ಮಾಯಿ ನಾಯಕತ್ವ ಕೇಂದ್ರದ ಮೋದಿ ನಾಯಕತ್ವದ ಬಗ್ಗೆ ರಾಜ್ಯದ ಜನರು ವಿಶ್ವಾಸ ಇಟ್ಟು ಬೆಂಬಲ ನೀಡಿದ್ದಾರೆ. ಮುಂಬರುವ ಎರಡು ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ನಾವು ಸ್ಪಷ್ಟ ಬಹುಮತ ಪಡೆಯುತ್ತೇವೆ ಎಂದರು.

ಇದನ್ನೂ ಓದಿ:ಪಾಲಿಕೆ ಚುನಾವಣೆಯಲ್ಲಿ ನಮಗೆ ಪ್ರಥಮ ಸೂಚನೆ ಸಿಕ್ಕಿದೆ: ಸಿಎಂ ಬೊಮ್ಮಾಯಿ

ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಇನ್ನೂ ಚರ್ಚೆ ನಡೆಯಾಗಿಲ್ಲ. ಯಡಿಯೂರಪ್ಪ ನಮ್ಮ ನಾಯಕರು ಅವರ ಮಾರ್ಗದರ್ಶನದಲ್ಲಿಯೆ ನಾವು ಚುನಾವಣೆ ಎದುರಿಸುತ್ತಿದ್ದೇವೆ. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಚುನಾವಣೆ ಪ್ರಚಾರದಲ್ಲಿ ಪಾಲ್ಗಳ್ಳದಿದ್ದರೂ ನಾವು ಎರಡನೇ ಹಂತದ ನಾಯಕರು ಪ್ರಚಾರ ಮಾಡಿ ಗೆದ್ದಿದ್ಸೇವೆ. ಇದರಿಂದ ನಮ್ಮ ಶಕ್ತಿ ಎಷ್ಟಿದೆ ಅಂತ ನೋಡಿ. ಕಾಂಗ್ರೆಸ್ ನ ಎಲ್ಲ ಹಂತದ ನಾಯಕರು ಪ್ರಚಾರ ಮಾಡಿದ್ದರೂ ಅವರ ಪರಿಸ್ಥಿತಿ ಈ ರೀತಿ ಇದೆ ಎಂದು ನಿರಾಣಿ ಹೇಳಿದರು.

Advertisement

ಕರ್ನಾಟಕದಲ್ಲಿ ಯಡಿಯೂರಪ್ಪ ಅವರನ್ನು ಅಮಿತ್ ಶಾ ಹೊಗಳಿದ್ದಾರೆ. ಅವರನ್ನು ಎಲ್ಲಿಯೂ ಬಿಟ್ಟು ಕೊಟ್ಟಿಲ್ಲ. ಬೊಮ್ಮಾಯಿ ಮುಖ್ಯಮಂತ್ರಿ ಇದ್ದಾಗ ಸಹಜವಾಗಿ ಅವರ ನಾಯಕತ್ವದಲ್ಲಿ ಅಂತ ಹೇಳಿದ್ದಾರೆ ಎಂದು ಶಾ ಹೇಳಿಕೆ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next