Advertisement

ನಿರ್ಭಯಾ ಪ್ರಕರಣ-ಗಲ್ಲು ಶಿಕ್ಷೆಗೆ ತಡೆ; ಹೈಕೋರ್ಟ್ ಆದೇಶದ ವಿರುದ್ಧ ಕೇಂದ್ರ ಸುಪ್ರೀಂ ಮೊರೆ

09:18 AM Feb 06, 2020 | Nagendra Trasi |

ನವದೆಹಲಿ:ನಿರ್ಭಯಾ ಪ್ರಕರಣದಲ್ಲಿ ನಾಲ್ವರು ದೋಷಿಗಳ ಗಲ್ಲುಶಿಕ್ಷೆಗೆ ವಿಚಾರಣಾಧೀನ ಕೋರ್ಟ್ ತಡೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ದಿಲ್ಲಿ ಹೈಕೋರ್ಟ್ ವಜಾಗೊಳಿಸಿರುವುದರ ವಿರುದ್ಧ ಕೇಂದ್ರ ಸರ್ಕಾರ ಮತ್ತು ದಿಲ್ಲಿ ಸರ್ಕಾರ ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

Advertisement

ನಿರ್ಭಯಾ ಅಪರಾಧಿಗಳ ಗಲ್ಲುಶಿಕ್ಷೆ ತಡೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ದಿಲ್ಲಿ ಹೈಕೋರ್ಟ್ ಬುಧವಾರ, ಎಲ್ಲಾ ಕಾನೂನು ಅವಕಾಶಗಳನ್ನು ಒಂದು ವಾರದೊಳಗೆ ಬಳಸಿಕೊಳ್ಳಬೇಕು. ನಂತರ ನಾಲ್ವರನ್ನು ಏಕಕಾಲದಲ್ಲಿ ಗಲ್ಲಿಗೇರಿಸುವ ಪ್ರಕ್ರಿಯೆ ನಡೆಸಬೇಕು ಎಂದು ಆದೇಶ ನೀಡಿತ್ತು.

ದಿಲ್ಲಿ ಹೈಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತು ದಿಲ್ಲಿ ಸರ್ಕಾರ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ, ನಾಲ್ವರು ಅಪರಾಧಿಗಳನ್ನು ಶೀಘ್ರವೇ ಗಲ್ಲಿಗೇರಿಸಲು ಆದೇಶ ನೀಡಬೇಕೆಂದು ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.

ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಪ್ರತ್ಯೇಕವಾಗಿ ಗಲ್ಲಿಗೇರಿಸಲು ಆದೇಶ ನೀಡಬೇಕು ಎಂದು ಕೋರಿದ್ದ ಕೇಂದ್ರದ ಮನವಿಯನ್ನೂ ಹೈಕೋರ್ಟ್ ತಳ್ಳಿಹಾಕಿದೆ. ಈ ಪ್ರಕರಣದಲ್ಲಿ ನಾಲ್ವರನ್ನು ಒಟ್ಟಿಗೆ ಗಲ್ಲಿಗೇರಿಸುವಂತೆ ಆದೇಶ ನೀಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next