Advertisement

ನಿರ್ಭಯಾ ಕೇಸ್ ಅಪರಾಧಿಗಳು ಕಾನೂನನ್ನು ಖುಷಿ ಸವಾರಿಯಂತೆ ಬಳಸುತ್ತಿದ್ದಾರೆ; ಕೇಂದ್ರ

09:59 AM Feb 02, 2020 | Nagendra Trasi |

ನವದೆಹಲಿ: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳು ಗಲ್ಲುಶಿಕ್ಷೆಯನ್ನು ವಿಳಂಬ ಮಾಡುವ ನಿಟ್ಟಿನಲ್ಲಿ ಕಾನೂನು ಮತ್ತು ನ್ಯಾಯಾಂಗ ಪ್ರಕ್ರಿಯೆಯನ್ನು ಖುಷಿಯ ಸವಾರಿಯಂತೆ ಬಳಸಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ಶನಿವಾರ ದಿಲ್ಲಿ ಹೈಕೋರ್ಟ್ ಗೆ ತಿಳಿಸಿದೆ.

Advertisement

ಗಲ್ಲುಶಿಕ್ಷೆ ಜಾರಿಯಾದ ನಂತರ ಮರಣದಂಡನೆ ಪ್ರಕ್ರಿಯೆ ವಿಳಂಬಗೊಳಿಸುವ ನಿಟ್ಟಿನಲ್ಲಿ ನಾಲ್ವರು ಅಪರಾಧಿಗಳು ಕಾನೂನು ಅವಕಾಶಗಳನ್ನು ಬಳಸಿಕೊಂಡು ವಿಳಂಬ ಮಾಡಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ದಿಲ್ಲಿ ಹೈಕೋರ್ಟ್ ನಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ಪೈಶಾಚಿಕ ಕೃತ್ಯ ಎಸಗಿದ್ದರೂ ಕೂಡಾ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ದೇಶದ ತಾಳ್ಮೆಯನ್ನು ಪರೀಕ್ಷಿಸಲು ಯತ್ನಿಸುತ್ತಿದ್ದು, ಇದು ಇನ್ನಷ್ಟು ವಿಳಂಬವಾಗುತ್ತ ಹೋದರೆ ದೇಶದ ಇತಿಹಾಸದಲ್ಲಿಯೇ ಇದೊಂದು ಕಪ್ಪು ಚುಕ್ಕೆಯಾಗಲಿದೆ ಎಂದು ಮೆಹ್ತಾ ವಾದಿಸಿದರು.

ನಿರ್ಭಯಾ ಪ್ರಕರಣದಲ್ಲಿ ಅಪರಾಧಿಯೊಬ್ಬ ರಾಷ್ಟ್ರಪತಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದು, ಇದು ತಿರಸ್ಕೃತಗೊಂಡಿದೆ. ಈ ಹಿನ್ನೆಲೆಯಲ್ಲಿ ಅಪರಾಧಿಯ ಅರ್ಜಿ ತಿರಸ್ಕೃತಗೊಂಡ ನಂತರ ಗಲ್ಲಿಗೇರಿಸಲು 14 ದಿನಗಳ ಕಾಲಾವಕಾಶ ನೀಡಬೇಕಾಗುತ್ತದೆ. ನಿಗದಿಯಂತೆ ಫೆಬ್ರುವರಿ 1ರಂದು ಬೆಳಗ್ಗೆ 6ಗಂಟೆಗೆ ನಾಲ್ವರು ಅಪರಾಧಿಗಳು ಗಲ್ಲಿಗೇರಬೇಕಾಗಿತ್ತು. ಆದರೆ ಶುಕ್ರವಾರ ವಿಚಾರಣೆ ನಡೆಸಿದ್ದ ಪಟಿಯಾಲಾ ಹೌಸ್ ಕೋರ್ಟ್ ಗಲ್ಲುಶಿಕ್ಷೆಯನ್ನು ಮುಂದೂಡಿತ್ತು. ಇದು ಅಪರಾಧಿಗಳಿಗೆ ಗಲ್ಲುಶಿಕ್ಷೆಯ ದಿನಾಂಕ ಮುಂದೂಡಿಕೆಯಾಗುತ್ತಿರುವುದು ಎರಡನೇ ಬಾರಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next