Advertisement

ಪೇಜಾವರ ಶ್ರೀ ಅನಾರೋಗ್ಯ: ತುರ್ತು ನೆರವು ಅಗತ್ಯವಿದ್ದಲ್ಲಿ ತಿಳಿಸಿ ಎಂದ ಸಚಿವೆ ನಿರ್ಮಲಾ

10:19 AM Dec 22, 2019 | Team Udayavani |

ಮಣಿಪಾಲ: ಪೇಜಾವರ ಮಠದ ಹಿರಿಯ ಯತಿ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಅನಾರೋಗ್ಯ ನಿಮಿತ್ತ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದು, ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Advertisement

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಶನಿವಾರ ಬೆಳಿಗ್ಗೆ ಕರೆ ಮಾಡಿ ಶ್ರೀಗಳ ಆರೋಗ್ಯ ವಿಚಾರಿಸಿದರು. ಪೇಜಾವರ ಶ್ರೀಗಳಂತವರು ಲಕ್ಷಕ್ಕೊಬ್ಬರು ಮಾತ್ರ ಈ ಭೂಮಿಯಲ್ಲಿ ಹುಟ್ಟಿ ಬರುತ್ತಾರೆ. ಅವರ ಕ್ಷೇಮಕ್ಕಾಗಿ ಪ್ರಾರ್ಥಿಸುವುದು ಇಡೀ ಸಮಾಜದ ಕರ್ತವ್ಯ ಎಂದು ನಿರ್ಮಲಾ ಸೀತರಾಮನ್ ಹೇಳಿದ್ದಾರೆ.

ಪೇಜಾವರ ಶ್ರೀಗಳ ಆರೋಗ್ಯ ಸಂಬಂಧಿಸಿದಂತೆ ಯಾವುದೇ ತುರ್ತು ನೆರವು ಅಗತ್ಯವಿದ್ದಲ್ಲಿ ತಿಳಿಸುವಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ವಿಹಿಂಪ ರಾಷ್ಟ್ರೀಯ ಪ್ರಧಾನ‌ ಕಾರ್ಯದರ್ಶಿ ಚಂಪತ್ ರಾಯ್ ಕೂಡಾ ಆರೋಗ್ಯ ವಿಚಾರಿಸಿದ್ದು, ಪೇಜಾವರ ಶ್ರೀಗಳು ಈ ದೇಶದ ಮಹಾನ್ ಸಂತ ಶಕ್ತಿ. ಅವರ ಆರೋಗ್ಯ ಸಮಗ್ರ ಹಿಂದೂ ಸಮಾಜಕ್ಕಾಗಿ ಅತೀ ಮುಖ್ಯ. ಆದ್ದರಿಂದ ಸಮಸ್ತ ಹಿಂದೂಗಳೂ ಅವರು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸೋಣ ಎಂದು ಪ್ರಾರ್ಥಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next