Advertisement
ಬಡವರಿಗಾಗಿ ಗರೀಬ್ ಕಲ್ಯಾಣ್ ಯೋಜನೆಗೆ 1,70, 000 ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗಿದೆ.ಮುಂದಿನ ಮೂರು ತಿಂಗಳ ಕಾಲ 5 ಕೆಜಿ ಅಕ್ಕಿ ಅಥವಾ ಗೋಧಿ, ಒಂದು ಕೇಜಿ ಬೇಳೆಯನ್ನು ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಲಕ್ಷ
Related Articles
*ಏಪ್ರಿಲ್ ಮೊದಲ ವಾರದಲ್ಲಿ ರೈತರ ಖಾತೆಗೆ 2 ಸಾವಿರ ರೂಪಾಯಿ ನಗದು ಹಣ ವರ್ಗಾವಣೆ, ಇದರಿಂದ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ 8.69 ಕೋಟಿ ರೈತರು ಲಾಭ ಪಡೆಯಲಿದ್ದಾರೆ.
Advertisement
*ಮನ್ರೇಗಾ ಯೋಜನೆಯಡಿಯ ಕೂಲಿಯನ್ನು 180 ರೂಪಾಯಿಯಿಂದ 200 ರೂ.ಗೆ ಏರಿಕೆ ಮಾಡಿದ್ದು, ಇದರಿಂದ 5 ಕೋಟಿ ಕುಟುಂಬಗಳಿಗೆ ಅನುಕೂಲವಾಗಲಿದೆ. ಪ್ರತಿಯೊಬ್ಬ ಕೂಲಿ ಕಾರ್ಮಿಕರಿಗೆ ಹೆಚ್ಚುವರಿಯಾಗಿ 2ಸಾವಿರ ರೂಪಾಯಿ ಹೆಚ್ಚಳ ಮಾಡಲಾಗಿದೆ.
*20 ಕೋಟಿ ಮಹಿಳೆಯರು ಜನ್ ಧನ್ ಖಾತೆ ಹೊಂದಿದ್ದು ಮುಂದಿನ ಮೂರು ತಿಂಗಳ ಕಾಲ ತಿಂಗಳಿಗೆ 500 ರೂಪಾಯಿ ಹಣ ವರ್ಗಾವಣೆಯಾಗಲಿದೆ.
*ದೇಶದ ಸುಮಾರು 80 ಕೋಟಿ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮುಂದಿನ ಮೂರು ತಿಂಗಳ ಕಾಲ 5 ಕೆಜಿ ಗೋಧಿ ಅಥವಾ ಅಕ್ಕಿ ವಿತರಣೆ
*ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ 1.70 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ನಡಿ ವಲಸೆ ಮತ್ತು ದಿನಗೂಲಿ ನೌಕರರಿಗೆ ವಿಶೇಷ ಯೋಜನೆ.