Advertisement

ನ. 15ರಂದು ಎಲ್ಲಾ ಸಿಎಂಗಳ ಜತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಸಭೆ

10:21 PM Nov 10, 2021 | Team Udayavani |

ಅಮರಾವತಿ: ದೇಶದ ಆರ್ಥಿಕ ಬೆಳವಣಿಗೆಗಾಗಿ ಎಲ್ಲಾ ರಾಜ್ಯಗಳಲ್ಲಿ ಕೈಗೊಳ್ಳಬೇಕಾದ ಮೂಲಸೌಕರ್ಯಗಳ ಕುರಿತಂತೆ ಚರ್ಚಿಸುವ ಸಲುವಾಗಿ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ನ. 15ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ.

Advertisement

ಈ ಕುರಿತಂತೆ, ಖುದ್ದು ನಿರ್ಮಲಾ ಸೀತಾರಾಮನ್‌ ಅವರೇ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರದ ಮುಖೇನ ಸೂಚಿಸಿದ್ದಾರೆ.

ನ. 15ರಂದು, ಮಧ್ಯಾಹ್ನ 3 ಗಂಟೆಯಿಂದ ಸಂಜೆ 6ರವರೆಗೆ ಸಭೆ ನಡೆಯಲಿದೆ. ಕೊರೊನಾ ಬಿಕ್ಕಟ್ಟಿನ ನಂತರ ದೇಶದ ಆರ್ಥಿಕತೆ ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಎಲ್ಲಾ ರಾಜ್ಯಗಳಲ್ಲಿ ಹೂಡಿಕೆಗಳನ್ನು ಆಕರ್ಷಿಸಲು ಕೈಗೊಳ್ಳಬಹುದಾದ ನಿಲುವುಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿವೆ.

ಇದನ್ನೂ ಓದಿ:ಐಎನ್‌ಕ್ಸ್‌ ಮೀಡಿಯಾ ಪ್ರಕರಣ: ದಾಖಲೆ ಪರಿಶೀಲಿಸಲು ಚಿದು, ಪುತ್ರಗೆ ಅವಕಾಶ

Advertisement

Udayavani is now on Telegram. Click here to join our channel and stay updated with the latest news.

Next