Advertisement

ದಸರಾ ಉದ್ಘಾಟನೆಗೆ ನಿಸಾರ್‌ ಅಹಮದ್‌?

06:15 AM Aug 13, 2017 | |

ಮೈಸೂರು: ಈ ಬಾರಿಯ ದಸರಾ ಮಹೋತ್ಸವ ಉದ್ಘಾಟನೆ ಭಾಗ್ಯ ನಿತ್ಯೋತ್ಸವ ಕವಿ ಡಾ.ಕೆ.ಎಸ್‌.ನಿಸಾರ್‌ ಅಹಮದ್‌ಗೆ ದೊರೆಯುವ ಸಾಧ್ಯತೆ ಇದೆ. ಇತ್ತೀಚೆಗೆ ಮೈಸೂರಿಗೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ, ದಸರಾ ಉದ್ಘಾಟಕರ ಹೆಸರನ್ನು
ಅಂತಿಮಗೊಳಿಸಿದ್ದು, ಆ.12ರ ಗಜಪಯಣದ ದಿನ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಪ್ರಕಟ ಮಾಡಲಿದ್ದಾರೆ ಎಂದು ತಿಳಿಸಿದ್ದರು.

Advertisement

ಆದರೆ, ಗಜಪಯಣದ ವೇಳೆ ಉದ್ಘಾಟಕರ ಹೆಸರು ಪ್ರಕಟ ಮಾಡದ ಸಚಿವ ಮಹದೇವಪ್ಪ, ದಸರಾ ಉದ್ಘಾಟಕರ ಹೆಸರನ್ನು ಮುಖ್ಯಮಂತ್ರಿಯವರು ಅಂತಿಮಗೊಳಿಸುತ್ತಾರೆ.

ಅ.17ರಂದು ಆನೆಗಳನ್ನು ಅರಮನೆಗೆ ಸ್ವಾಗತಿಸುವ ಸಂದರ್ಭದಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು. ಸಂಭಾವ್ಯರ ಪಟ್ಟಿಯಲ್ಲಿ ನಿತ್ಯೋತ್ಸವ ಕವಿ ಡಾ.ಕೆ.ಎಸ್‌.ನಿಸಾರ್‌ ಅಹಮದ್‌ ಅವರ ಹೆಸರಿದ್ದು, ಈ ವರ್ಷ ಅವರನ್ನೇ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next