Advertisement

ಮತ್ತೆ ನಿಷ್ಕರ್ಷ

11:55 AM Aug 16, 2018 | Team Udayavani |

ಹಳೆಯ ಚಿತ್ರಗಳ ಹೆಸರಿಟ್ಟುಕೊಂಡು ಹೊಸ ಸಿನಿಮಾ ಮಾಡುವುದು ಇತ್ತೀಚೆಗೆ ಟ್ರೆಂಡ್‌ ಆಗಿದೆ. ಈಗಾಗಲೇ ಹಳೆಯ ಹೆಸರಿಟ್ಟುಕೊಂಡು, ಹಲವು ಹೊಸ ಚಿತ್ರಗಳು ತಯಾರಾಗಿದ್ದು, ಈಗ ಆ ಸಾಲಿಗೆ ಇನ್ನೊಂದು ಸೇರ್ಪಡೆ “ನಿಷ್ಕರ್ಷ’. ಸುನೀಲ್‌ ಕುಮಾರ್‌ ದೇಸಾಯಿ ನಿರ್ದೇಶನದಲ್ಲಿ ಈ ಹಿಂದೆ ಮೂಡಿಬಂದಿದ್ದ “ನಿಷ್ಕರ್ಷ’ ದೊಡ್ಡ ಹಿಟ್‌ ಆಗಿತ್ತು. ಈಗ ಅದೇ ಹೆಸರಿನ ಹೊಸ ಚಿತ್ರದ ಚಿತ್ರೀಕರಣ ಆಗಸ್ಟ್‌ 20ರಿಂದ ಪ್ರಾರಂಭವಾಗಲಿದೆ. ಚಿತ್ರದ ಮುಹೂರ್ತಕ್ಕೆ ಪುನೀತ್‌ ಆಗಮಿಸಿ, ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಲಿದ್ದಾರೆ.

Advertisement

ಹಿಮಾದ್ರಿ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ತಯಾರಾಗುತ್ತಿರುವ ಈ ಚಿತ್ರವನ್ನು ಸಿ.ಎಂ. ವಿಜಯ್‌ ಎನ್ನುವವರು ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದಾರೆ. ಮನೋರಂಜನೆ, ಕುತೂಹಲ ಹಾಗೂ ಕೌಟುಂಬಿಕ ಕಥಾವಸ್ತು ಹೊಂದಿರುವ ಈ ಚಿತ್ರದಲ್ಲಿ ಅನಿಕೇತನ್‌ ನಾಯಕನಾಗಿ ಕಾಣಿಸಿಕೊಂಡರೆ, “ಹುಲಿರಾಯ’ ಚಿತ್ರದ ಮೂಲಕ ಪರಿಚಿತರಾದ ದಿವ್ಯ ಉರುಡುಗ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನು ಅನಂತ್‌ ನಾಗ್‌, ಸಾಯಿಕುಮಾರ್‌, ಕಿಶೋರ್‌, ಚಿಕ್ಕಣ್ಣ, ಅಚ್ಯುತ್‌ ಕುಮಾರ್‌, ಸುಧಾ ಬೆಳವಾಡಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹೊಸ “ನಿಷ್ಕರ್ಷ’ಕ್ಕಾಗಿ ಬೆಂಗಳೂರು, ಮೈಸೂರು, ರಾಜಸ್ತಾನ ಮುಂತಾದ ಕಡೆ 40 ದಿನಗಳ ಚಿತ್ರೀಕರಣ ನಡೆಯಲಿದೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು ವಿವೇಕ್‌ ಚಕ್ರವರ್ತಿ ಸಂಗೀತ ಸಂಯೋಜಿಸುತ್ತಿದ್ದಾರೆ. ಇನ್ನು ಸರವಣನ್‌ ಅವರ ಛಾಯಾಗ್ರಹಣ ಮತ್ತು ಕೆ.ಎಂ. ಪ್ರಕಾಶ್‌ ಸಂಕಲನ ಈ ಚಿತ್ರಕ್ಕಿದೆ.

Advertisement

Udayavani is now on Telegram. Click here to join our channel and stay updated with the latest news.

Next