Advertisement

ವಿಚಾರಣೆಗೆ ನಿತ್ಯಾನಂದ ಗೈರು: ವಿವರಣೆ ಕೇಳಿದ ಹೈ

11:17 PM Jan 31, 2020 | Lakshmi GovindaRaj |

ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸುತ್ತಿರುವ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ಸುಮಾರು ಒಂದೂವರೆ ವರ್ಷದಿಂದ ವಿಚಾರಣಾ ನ್ಯಾಯಾಲಯಕ್ಕೆ ಹಾಜರಾಗದೇ ಇರುವ ಕುರಿತು ರಾಮನಗರದ 3ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್‌ ನ್ಯಾಯಾಧೀ ಶರಿಂದ ಹೈಕೋರ್ಟ್‌ ವರದಿ ಕೇಳಿದೆ.

Advertisement

ಅತ್ಯಾಚಾರ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಪ್ರಕರಣದಲ್ಲಿ ನಿತ್ಯಾನಂದ ಸ್ವಾಮೀಜಿಗೆ 2010ರಲ್ಲಿ ಮಂಜೂರು ಮಾಡಿರುವ ಜಾಮೀನು ರದ್ದುಪಡಿಸುವಂತೆ ಕೋರಿ ದೂರುದಾರ ಲೆನಿನ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಜಾನ್‌ ಮೈಕೆಲ್‌ ಕುನ್ಹಾ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಈ ವೇಳೆ, ಪ್ರಕರಣದ ಮೊದಲನೇ ಆರೋಪಿ ನಿತ್ಯಾನಂದ ಸ್ವಾಮೀಜಿ 2018ರ ಜೂ.5 ನಂತರದಿಂದ ವಿಚಾರಣೆಗೆ ಏಕೆ ಹಾಜರಾಗಿಲ್ಲ ಮತ್ತು ವಿಚಾರಣಾ ಪ್ರಕ್ರಿಯೆಯ ಸದ್ಯದ ಸ್ಥಿತಿಗತಿ ಕುರಿತು ರಾಮನಗರದ 3ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್‌ ನ್ಯಾಯಾಧೀಶರು ಹೈಕೋರ್ಟ್‌ಗೆ ವರದಿ ಸಲ್ಲಿಸಬೇಕು.

ಜೊತೆಗೆ, ಸಿಐಡಿ ತನಿಖಾಧಿಕಾರಿ ಖುದ್ದಾಗಿ 2020ರ ಫೆ.3ರೊಳಗೆ ನಿತ್ಯಾನಂದ ಸ್ವಾಮೀಜಿಗೆ ನೋಟಿಸ್‌ ಜಾರಿ ಮಾಡಿ ಆ ಕುರಿತು, ಫೆ.3ಕ್ಕೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next