Advertisement

ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್‌ ಗಡ್ಕರಿ 

02:24 PM Dec 07, 2018 | Team Udayavani |

ಮುಂಬಯಿ: ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ವೇದಿಯಲ್ಲೇ ಕುಸಿದು ಬಿದ್ದ ಘಟನೆ ಶುಕ್ರವಾರ ನಡೆದಿದೆ.

Advertisement

ಆಹ್ಮದ್‌ನಗರದಲ್ಲಿರುವ ಮಹಾತ್ಮಾ ಪುಲೆ ಕೃಷಿ ವಿದ್ಯಾಪೀಠದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. 

ವೇದಿಕೆಯಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಎದ್ದು ನಿಂತಾಗ ಸಚಿವ ಗಡ್ಕರಿ ಕುಸಿದು ಬಿದ್ದಿದ್ದಾರೆ. ಕೂಡಲೆ ಪಕ್ಕದಲ್ಲಿದ್ದ ಗಣ್ಯರು ಮತ್ತು ಭದ್ರತಾ ಸಿಬಂದಿಗಳು ಅವರನ್ನು ಮೇಲಕ್ಕೆತ್ತಿ ಉಪಚರಿಸಿದ್ದಾರೆ.

ಅವರಿಗೆ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಅತಿಯಾದ ತಾಪ, ಕಡಿಮೆ ಸಕ್ಕರೆ ಪ್ರಮಾಣದಿಂದ ಅವರು ಕುಸಿದು ಬಿದ್ದಿದ್ದಾರೆ ಎಂದು ಪರೀಕ್ಷೆಯಲ್ಲಿ ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next