Advertisement

ಪಶ್ಚಿಮ ಬಂಗಾಳ: ಕಾರ್ಯಕ್ರಮದಲ್ಲೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅಸ್ವಸ್ಥ

03:29 PM Nov 17, 2022 | Team Udayavani |

ಪಶ್ಚಿಮ ಬಂಗಾಳ : ಸಿಲಿಗುರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಆರೋಗ್ಯ ಹಠಾತ್ ಹದಗೆಟ್ಟಿದೆ.

Advertisement

ನಿತಿನ್ ಗಡ್ಕರಿ ಅವರು ಸಿಲಿಗುರಿಯ ರಸ್ತೆಯೊಂದರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮದ ವೇದಿಕೆಯ ಬಳಿಯ ಕೊಠಡಿಯಲ್ಲಿ ಚಹಾ ಕುಡಿಯುತ್ತಿದ್ದಾಗ ಇದ್ದಕ್ಕಿದ್ದಂತೆ ಅವರ ಆರೋಗ್ಯ ಹದಗೆಟ್ಟಿದೆ ಎನ್ನಲಾಗಿದೆ. ಕೂಡಲೇ ನಿಯೋಟಿಯಾ ಆಸ್ಪತ್ರೆಯ ಖ್ಯಾತ ವೈದ್ಯ ಪಿ.ಬಿ.ಭುಟಿಯಾ ಅವರು ಸಚಿವರ ಅರೋಗ್ಯ ತಪಾಸಣೆ ನಡೆಸಿದ್ದಾರೆ.

ಬಳಿಕ ಸಿಲಿಗುರಿಯ ಮಟಿಗಾರದಲ್ಲಿರುವ ಬಿಜೆಪಿ ಸಂಸದ ರಾಜು ಬಿಸ್ತಾ ಅವರ ನಿವಾಸಕ್ಕೆ ಕರೆದೊಯ್ದು ಮೂವರು ವೈದ್ಯರ ತಂಡ ನಿತಿನ್ ಗಡ್ಕರಿ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಸದ್ಯ ಸ್ವಲ್ಪ ಚೇತರಿಸಿಕೊಂಡಿದ್ದು, ಶೀಘ್ರದಲ್ಲೇ ದೆಹಲಿಗೆ ಕರೆದುಕೊಂಡು ಹೋಗಬಹುದು ಎನ್ನಲಾಗಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಿತಿನ್ ಗಡ್ಕರಿ ಅವರ ಆರೋಗ್ಯ ವಿಚಾರಿಸಿದ್ದು ಸಚಿವರ ಆರೋಗ್ಯಕ್ಕೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡುವಂತೆ ಸಿಲಿಗುರಿ ಕಮಿಷನರ್ ಗೆ ಆದೇಶಿಸಿದ್ದಾರೆ.

ಈ ಹಿಂದೆಯೂ ಹಲವು ಕಾರ್ಯಕ್ರಮಗಳ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಆರೋಗ್ಯ ಹದಗೆಟ್ಟಿತ್ತು. 2018ರ ಸೆಪ್ಟೆಂಬರ್‌ನಲ್ಲಿ ಅಹ್ಮದ್‌ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಇದಲ್ಲದೆ, ಏಪ್ರಿಲ್ 2010 ರಲ್ಲಿ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಗಡ್ಕರಿ ತಲೆ ಸುತ್ತಿ ಬಿದ್ದಿದ್ದರು.

Advertisement

ಇದನ್ನೂ ಓದಿ : ಬೆಚ್ಚಿ ಬೀಳಿಸುವ ಘಟನೆ: ಭಿಕ್ಷೆ ಬೇಡುವಂತೆ ನಟಿಸಿ TDP ನಾಯಕನ ಮೇಲೆ ಮಾರಾಕಾಸ್ತ್ರದಿಂದ ದಾಳಿ

Advertisement

Udayavani is now on Telegram. Click here to join our channel and stay updated with the latest news.

Next