Advertisement

11ರಂದು ನಿತೀಶ್‌ ಬೆಂಗಳೂರಿಗೆ

06:00 AM Apr 07, 2018 | Team Udayavani |

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸಂಯುಕ್ತ ಜನತಾದಳ (ಜೆಡಿಯು) ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿರುವುದರಿಂದ ಪಕ್ಷದ ಪರ ಪ್ರಚಾರಕ್ಕೆ ಚಾಲನೆ ನೀಡಲು ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಏ.11ರಂದು ಬೆಂಗಳೂರಿಗೆ ಬರಲಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜೆಡಿಯು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂಜಯ್‌ ಝಾ, ಅಂದು ಮಧ್ಯಾಹ್ನ 1.30ಕ್ಕೆ ಬೆಂಗಳೂರಿಗೆ ಆಗಮಿಸಲಿರುವ ನಿತೀಶ್‌ ಕುಮಾರ್‌, ಮಧ್ಯಾಹ್ನ 3 ಗಂಟೆಗೆ ವೈಯಾಲಿಕಾವಲ್‌ನ ಚೌಡಯ್ಯ ಸ್ಮಾರಕ ಭವನದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆಂದು ಹೇಳಿದರು. ನಿತೀಶ್‌ ಕುಮಾರ್‌
ಬಂದು ಹೋದ ನಂತರ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next