Advertisement

ಜೆಡಿಯು ಅಭ್ಯರ್ಥಿಗಳ ಪರ ನಿತೀಶ್‌ ಕುಮಾರ್‌ ಪ್ರಚಾರ

07:30 AM Apr 29, 2018 | Team Udayavani |

ಬೆಂಗಳೂರು: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಮೇ 6ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಚೆನ್ನಗಿರಿ, ಹುಬ್ಬಳ್ಳಿ -ಧಾರವಾಡ ಸೇರಿ ಕೆಲವೆಡೆ ಜೆಡಿಯು ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

Advertisement

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಯು ಯುವ ಘಟಕದ ರಾಜ್ಯಾಧ್ಯಕ್ಷ ಕೆ.ವಿ.ಶಿವರಾಂ, ಚೆನ್ನಗಿರಿಯಲ್ಲಿ ಮಹಿಮಾ ಜೆ.ಪಟೇಲ್‌ ಕಣಕ್ಕಿಳಿದಿದ್ದು ಅವರ ಪರವಾಗಿ ನಿತೀಶ್‌ ಕುಮಾರ್‌ ಪ್ರಚಾರ ನಡೆಸಲಿದ್ದಾರೆ. ಅಲ್ಲದೆ, ಹುಬ್ಬಳ್ಳಿ-ಧಾರವಾಡ, ಆಳಂದ ಸೇರಿದಂತೆ ಕೆಲವು ಕಡೆಗಳಲ್ಲಿ ಮತಯಾಚನೆ ಮಾಡಲಿದ್ದಾರೆ ಎಂದು ತಿಳಿಸಿದರು.

ಕೇಂದ್ರದಲ್ಲಿ ಎನ್‌ಡಿಎ ಸರ್ಕಾರಕ್ಕೆ ಬೆಂಬಲ ನೀಡಿರುವ ಜೆಡಿಯು, ಬಿಹಾರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದೆ. ಆದರೆ, ರಾಜ್ಯದಲ್ಲಿ ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿಯಿಲ್ಲ. ಈಗಾಗಲೇ ಸುಮಾರು 31 ಅಭ್ಯರ್ಥಿಗಳು ಚುನಾವಣಾ ಅಖಾಡಕ್ಕಿಳಿದಿದ್ದು, ಚುನಾವಣಾ ನಂತರ ಮೈತ್ರಿ ಬಗ್ಗೆ ಆಲೋಚಿಸುವುದಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next