Advertisement

ಚನ್ನಗಿರಿಗೆ ಇಂದು ನಿತೀಶ್‌ ಕುಮಾರ್‌

07:15 AM May 06, 2018 | Team Udayavani |

ಬೆಂಗಳೂರು: ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಹಾಗೂ ಬಿಹಾರದ ಸಿಎಂ ನಿತೀಶ್‌ಕುಮಾರ್‌ ರವಿವಾರ ರಾಜ್ಯಕ್ಕೆ ಆಗಮಿಸಲಿದ್ದು, ಚನ್ನಗಿರಿಯಲ್ಲಿ ಸಂಯುಕ್ತ ಜನತಾದಳ ಅಭ್ಯರ್ಥಿ ಮಹಿಮಾ ಪಟೇಲ್‌ ಪರ ಪ್ರಚಾರ ನಡೆಸಲಿದ್ದಾರೆ. 

Advertisement

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಷ್ಟ್ರೀಯ ವಕ್ತಾರ ಮತ್ತು ರಾಜ್ಯ ಉಸ್ತುವಾರಿ ಸಂಜಯ್‌ ಝಾ, ಮಧ್ಯಾಹ್ನ 1.30ರ ವೇಳೆಗೆ ಬೆಂಗಳೂರಿಗೆ ಆಗಮಿಸಲಿರುವ ನಿತೀಶ್‌ ಕುಮಾರ್‌ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದು ನಂತರ ಚನ್ನಗಿರಿ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆಂದು ಹೇಳಿದರು.

ಜೆಡಿಯು ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಕೆ.ವಿ.ಶಿವರಾಂ ಮಾತನಾಡಿ, ಚನ್ನಗಿರಿ, ಅಳಂದ ಸೇರಿ 28 ಕ್ಷೇತ್ರಗಳಲ್ಲಿ ಪಕ್ಷ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, 10-15 ಕ್ಷೇತ್ರಗಳಲ್ಲಿ ಜಯ ಸಾಧಿಸುವ ಸಾಧ್ಯತೆಯಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next