Advertisement

ಜೆಡಿಯು ರಾಜ್ಯಸಭಾ ನಾಯಕ ಸ್ಥಾನದಿಂದ ಶರದ್ ಯಾದವ್ ಗೆ ಕೊಕ್

02:57 PM Aug 12, 2017 | Sharanya Alva |

ನವದೆಹಲಿ:ಬಿಜೆಪಿಯೊಂದಿಗಿನ ಮೈತ್ರಿಯನ್ನು ಒಪ್ಪಿಕೊಳ್ಳುವುದಾದರೆ ಒಪ್ಪಿಕೊಳ್ಳಿ. ಇಲ್ಲದಿದ್ದರೆ ಹೊರ ನಡೆಯಿರಿ ಎಂದು ಜೆಡಿಯು ನಾಯಕ ಶರದ್ ಯಾದವ್ ಅವರಿಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಖಡಕ್ ಸಂದೇಶ ರವಾನಿಸಿದ ಬೆನ್ನಲ್ಲೇ ಜೆಡಿಯು ಪಕ್ಷದ ರಾಜ್ಯಸಭಾ ನಾಯಕ ಸ್ಥಾನದಿಂದ ಶರದ್ ಯಾದವ್ ಅವರನ್ನು ವಜಾಗೊಳಿಸಿ ರಾಮ್ ಚಂದ್ರ ಪ್ರಸಾದ್ ಸಿಂಗ್ ಅವರನ್ನು ನೇಮಕ ಮಾಡಿದೆ.

Advertisement

ಈ ಭಾರೀ ರಾಜಕೀಯ ಬೆಳವಣಿಗೆಯನ್ನು ಮೂಲಗಳು ಖಚಿತಪಡಿಸಿದ್ದು, ಜೆಡಿಯು ಮುಖಂಡರು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ನಮ್ಮ ಪಕ್ಷದ ಪ್ರತಿನಿಧಿಯನ್ನಾಗಿ ಸಿಂಗ್ ಅವರನ್ನು ಆಯ್ಕೆ ಮಾಡಿರುವುದಾಗಿ ಲಿಖಿತ ಮನವಿ ನೀಡಿರುವುದಾಗಿ ಬಿಹಾರ ಜೆಡಿಯು ಅಧ್ಯಕ್ಷ ವಶಿಷ್ಠ ನಾರಾಯಣ್ ಶನಿವಾರ ತಿಳಿಸಿದ್ದಾರೆ.

ಇತ್ತೀಚೆಗೆ ಆರ್ ಜೆಡಿ ಸಖ್ಯ ತೊರೆದು ಬಿಜೆಪಿಯೊಂದಿಗೆ ಸೇರಿ ಸರ್ಕಾರ ರಚನೆ ಮಾಡಿದ್ದರಿಂದ ಸಿಎಂ ನಿತೀಶ್ ಕುಮಾರ್ ವಿರುದ್ಧ ಶರದ್ ಯಾದವ್ ಅವರು ಮುನಿಸಿಕೊಂಡಿದ್ದರು. ಅಲ್ಲದೆ ನಿತೀಶ್ ನಿರ್ಧಾರವನ್ನು ಬಹಿರಂಗವಾಗಿಯೇ  ಟೀಕಿಸಿದ್ದರು. ಈ ಘಟನೆ ಬಳಿಕ ಜೆಡಿಯುನಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿತ್ತು. 

Advertisement

Udayavani is now on Telegram. Click here to join our channel and stay updated with the latest news.

Next