Advertisement
ಕೂಳೂರಿನಲ್ಲಿ ಮಾಧ್ಯಮ ದೊಂದಿಗೆ ಮಾತನಾಡಿದ ಅವರು, ನಮ್ಮ ಸಂಘದ ರಾಜ್ಯಾಧ್ಯಕ್ಷ ಡಾ| ಜಿ.ಆರ್. ಷಣ್ಮುಗಪ್ಪ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಸೆ. 9ರಂದು ಟ್ರಾನ್ಸ್ ಪೋರ್ಟ್ ಮೀಟ್ ಸಭೆಯ ಬಳಿಕ ಭೇಟಿ ಮಾಡಿ ಟೋಲ್ ಗೇಟ್ ತೆರವು ಬಗ್ಗೆ ಮನವಿ ನೀಡಿದ್ದು, ಸಚಿವರಿಂದ ಭರವಸೆ ದೊರಕಿದೆ. ಟೋಲ್ ಗೇಟ್ ವಿರೋಧಿ ಸಮಿತಿ ಸೆ. 13ರಂದು ನಡೆಸಲು ಉದ್ದೇಶಿಸಿರುವ ಧರಣಿಯಲ್ಲಿ ನಾವೂ ಭಾಗಿಯಾಗುತ್ತೇವೆ. ಸರಕಾರ ಮಾತು ತಪ್ಪಿದಲ್ಲಿ ಟ್ರಕ್ಗಳ ಮೂಲಕ ಟೋಲ್ ಗೇಟ್ಗೆ ಮುತ್ತಿಗೆ ಹಾಕುತ್ತೇವೆ ಎಂದರು.
ಸುರತ್ಕಲ್ ಟೋಲ್ ಗೇಟ್ ಮುಂಭಾಗ ಸೆ. 13ರಂದು ಹಮ್ಮಿಕೊಂಡಿರುವ ಸಾಮೂಹಿಕ ಧರಣಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಶನ್, ಉಭಯ ಜಿಲ್ಲೆಗಳ ಬಸ್ ಮಾಲಕರ ಸಂಘಟನೆಗಳು, ಕಾರ್ಮಿಕರ ಸಂಘಟನೆಗಳು, ವಿವಿಧ ಪಕ್ಷಗಳು ಸೇರಿದಂತೆ ಹಲವು ಸಂಘ- ಸಂಸ್ಥೆಗಳು ಭಾಗವಹಿಸುವುದಾಗಿ ಘೋಷಿಸಿವೆ.
Related Articles
Advertisement